ಯುಎಇದುಬೈಯ ಕರಾನಿ ಇಂಟೀರಿಯರ್'ನಲ್ಲಿ ಕಾರ್ಮಿಕ ಜಾಗೃತಿ ಅಭಿಯಾನ

ದುಬೈಯ ಕರಾನಿ ಇಂಟೀರಿಯರ್’ನಲ್ಲಿ ಕಾರ್ಮಿಕ ಜಾಗೃತಿ ಅಭಿಯಾನ

ದುಬೈ: ದುಬೈಯ ಭಾರತೀಯ ರಾಯಭಾರಿ ಕಚೇರಿ ಮತ್ತು ಏಮ್ ಇಂಡಿಯಾ ಫೋರಂ ಸಂಯುಕ್ತ ಆಶ್ರಯದಲ್ಲಿ ದುಬೈಯ ಕರಾನಿ ಇಂಟೀರಿಯರ್ ಎಲ್‌ಎಲ್‌ಸಿಯಲ್ಲಿ ಕಾರ್ಮಿಕರ ಜಾಗೃತಿ ಅಭಿಯಾನ ಇತ್ತೀಚಿಗೆ ಆಯೋಜಿಸಲಾಗಿತ್ತು.

ಕಾರ್ಯಕ್ರಮವು ಯೋಗಾದೊಂದಿಗೆ ಪ್ರಾರಂಭವಾಯಿತು. ನಂತರ ದುಬೈನ PBSK ವತಿಯಿಂದ ಕಲ್ಯಾಣ ಯೋಜನೆಗಳು ಮತ್ತು ದೂರು ಪರಿಹಾರ ವ್ಯವಸ್ಥೆಗಳ ಕುರಿತು ಮಾಹಿತಿ ನೀಡಲಾಯಿತು. ಆರ್ಥಿಕ ವಂಚನೆಗಳ ಕುರಿತು ICAI ದುಬೈ ಶಾಖೆಯವರು ಉಪನ್ಯಾಸ ನೀಡಿದರು.

ಭಾರತೀಯ ರಾಯಭಾರಿ ಕಚೇರಿಯಿಂದ ಕಾರ್ಮಿಕ ಮತ್ತು ಮದದ್ ವಿಭಾಗದ ಕಾನ್ಸುಲ್ ಪಬಿತ್ರ ಮಜುಂದರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಮಿಕ ವಿಭಾಗದ ಉಪ ಕಾನ್ಸುಲ್ ದೀಪಕ್ ದಾಗರ್, ಗುರೂಜಿ ರಾಜರಾಮಜಿ, ಸಂತ್ ಕೃಪರಾಮಜಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಏಮ್ ಇಂಡಿಯಾ ಫೋರಂನ ಸಂಸ್ಥಾಪಕ ಅಧ್ಯಕ್ಷ ಶಿರಾಲಿ ಶೈಖ್ ಮುಝಫರ್ ಅವರ ನೇತೃತ್ವದಲ್ಲಿ, ಸಮನ್ವಯಕರಾದ ಮೊಹಮ್ಮದ್ ಅಝೀಮ್ ಮತ್ತು ಉಪಾಧ್ಯಕ್ಷ ಮೊಹಮ್ಮದ್ ನಿಯಾಝ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಆರ್ಥಿಕ ವಂಚನೆಗಳು, ಸೈಬರ್ ಅಪರಾಧಗಳು, ನಕಲಿ ಉದ್ಯೋಗ ಏಜೆನ್ಸಿಗಳು, ಸಿಮ್ ಕಾರ್ಡ್ ವಂಚನೆ ಸೇರಿದಂತೆ ಹಲವಾರು ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಿದರು.

ಕಾರ್ಯಕ್ರಮದ ಅಂತ್ಯದಲ್ಲಿ ದುಬೈಯ ಭಾರತೀಯ ರಾಯಭಾರಿ ಕಚೇರಿಯವರು ಕಾರ್ಮಿಕರ ಹಿತಾಸಕ್ತಿಗಾಗಿ ಏಮ್ ಇಂಡಿಯಾ ಫೋರಂ ಕೈಗೊಂಡಿರುವ ಮಹತ್ವದ ಕಾರ್ಯಗಳಿಗಾಗಿ ಪ್ರಶಂಸೆ ವ್ಯಕ್ತಪಡಿಸಿದರು.

Hot this week

ಜರ್ಮನಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಜಾನಪದ ವೈಭವ; ಸಂಸ್ಕೃತಿಯ ಗತ ವೈಭವ ಸೃಷ್ಟಿ

ಜರ್ಮನಿ: ರೈನ್ ಮೈನ್ ಕನ್ನಡ ಸಂಘದಿಂದ ಇದೇ ಮೊದಲ ಬಾರಿಗೆ ಶನಿವಾರ...

ಕನ್ನಡ ಸಂಘ ಬಹರೈನ್‌ನಿಂದ ಆರೋಗ್ಯ ದಿನ; ಉಚಿತ ವೈದ್ಯಕೀಯ ಶಿಬಿರ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಅಲ್ ಹಿಲಾಲ್ ಹೆಲ್ತ್ ಕೇರ್...

ಕರ್ನಾಟಕ ಸಂಘ ಖತರ್‌ಗೆ ನೂತನ ಆಡಳಿತ ಸಮಿತಿ ಆಯ್ಕೆ; 2026–2028 ಅವಧಿಗೆ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವಿರೋಧ ಆಯ್ಕೆ

ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ...

ಖತರ್‌ ಕರ್ನಾಟಕ ಸಂಘದಿಂದ ‘ತಾಯಂದಿರ ದಿನ 2026’ ಆಚರಣೆ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)...

ಮೇ 15ರಂದು ಬಹರೈನ್ ಕನ್ನಡ ಸಂಘದ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ

ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ಅಲ್ ಹಿಲಾಲ್ ಹೆಲ್ತ್ ಕೇರ್ ಗ್ರೂಪ್...

Related Articles

Popular Categories