ಯುಎಇದುಬೈಯಲ್ಲಿ ಸಂಕಷ್ಟಕ್ಕೀಡಾಗಿರುವ ಪ್ರವಾಸಿ ಕನ್ನಡಿಗರಿಗೆ ಧೈರ್ಯ ತುಂಬಿದ ಎಂ.ಎ.ಗಫೂರ್

ದುಬೈಯಲ್ಲಿ ಸಂಕಷ್ಟಕ್ಕೀಡಾಗಿರುವ ಪ್ರವಾಸಿ ಕನ್ನಡಿಗರಿಗೆ ಧೈರ್ಯ ತುಂಬಿದ ಎಂ.ಎ.ಗಫೂರ್

ದುಬೈ: ಅಮೇರಿಕ-ಇಸ್ರೇಲ್ ಹಾಗು ಇರಾನ್ ಮಧ್ಯೆಗಿನ ಸಂಘರ್ಷದಿಂದ ದುಬೈಯಲ್ಲಿ ಸಂಕಷ್ಟಕ್ಕೀಡಾಗಿರುವ ಕನ್ನಡಿಗ ಪ್ರವಾಸಿಗರ ಜೊತೆ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಅವರು ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಆದಷ್ಟು ಬೇಗ ಕರ್ನಾಟಕಕ್ಕೆ ಕರೆತರುವ ವ್ಯವಸ್ಥೆ ಮಾಡಿಸುವುದಾಗಿ ಭರವಸೆ ನೀಡಿದ್ದಾರೆ.

ಕನ್ನಡಿಗಾಸ್ ಹೆಲ್ಪ್ ಲೈನ್ ಸಂಯೋಜಕ, ಬಿಸಿಸಿಐ ಯುಎಇ ಅಧ್ಯಕ್ಷರಾದ ಹಿದಾಯತ್ ಅಡ್ಡೂರು ಅವರ ನೇತೃತ್ವದಲ್ಲಿ ತಂಡವೊಂದು ಸೋಮವಾರ ಸಂಜೆ ದುಬೈಯಲ್ಲಿ ಸಿಲುಕಿ ಹಾಕಿಕೊಂಡಿರುವ ಕನ್ನಡಿಗ ಪ್ರವಾಸಿಗರನ್ನು ಭೇಟಿಯಾಗಿ ಅವರಿಗೆ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಿತು.

ಈ ವೇಳೆ ದೂರವಾಣಿ ಮೂಲಕ ಕನ್ನಡಿಗ ಪ್ರವಾಸಿಗರ ಜೊತೆ ಮಾತನಾಡಿದ ಗಫೂರ್ ಅವರು, ನಿಮಗೆ ಎಲ್ಲ ರೀತಿಯಿಂದಲೂ ಕರ್ನಾಟಕ ಸರಕಾರ ರಕ್ಷಣೆಗೆ ಬದ್ಧವಾಗಿದೆ. ನೀವು ಯಾರು ಆತಂಕಕ್ಕೀಡಾಗಬೇಡಿ, ಸರಕಾರದ ಜೊತೆ ತಾನು ಮಾತನಾಡುವುದಾಗಿಯೂ ಧೈರ್ಯ ತುಂಬಿದರು.

ಈ ವೇಳೆ ಶಶಿಧರ್ ನಾಗರಾಜಪ್ಪ(ಅಧ್ಯಕ್ಷರು, ಕರ್ನಾಟಕ ಸಂಘ, ದುಬೈ), ಸಲೀಂ ಮೂಡಬಿದ್ರೆ(ಉದ್ಯಮಿ), ಇಕ್ರಂ ಮೊಹಮ್ಮದ್ ಮೂಳೂರು, ಸಮದ್ ಬಿರಾಲಿ, ಅದ್ದು ಹೊನ್ನಾವರ, ಸಿನಾನ್ ಸಿದ್ದಿಕಿ, ನವಾಝ್ ವಾಮಂಜೂರು ಸೇರಿದಂತೆ ಮತ್ತಿತರರು ಹಾಜರಿದ್ದರು.

Hot this week

DKSC ಕುವೈತ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾಗಿ ಅನ್ವರ್ ಸಾಹೇಬ್ ಕುಂಜಾಲ್ ಆಯ್ಕೆ

ಕುವೈತ್: ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (DKSC), ಇದರ ಕುವೈತ್ ರಾಷ್ಟ್ರೀಯ...

ಕರ್ನಾಟಕ ಸಂಘ ಖತರ್‌ನಿಂದ ರಮಝಾನ್‌ ಸೇವಾ ಕಾರ್ಯ: ಇಫ್ತಾರ್ ಆಹಾರ ಕಿಟ್‌ಗಳ ವಿತರಣೆ

ಕರ್ನಾಟಕ ಸಂಘ ಖತರ್‌ (KSQ), ರಮಝಾನ್‌ ಮಾಸದ ಪವಿತ್ರ ಚಟುವಟಿಕೆಗಳ ಭಾಗವಾಗಿ...

ಅಟ್ಲಾಂಟ ಒಕ್ಕಲಿಗರ ಕೂಟದಿಂದ ಪ್ರಥಮ ಸಮಾವೇಶ

ಕೆ. ಆರ್. ಶ್ರೀನಾಥ್, ಅಟ್ಲಾಂಟ ಅಟ್ಲಾಂಟ: ಫೆಬ್ರವರಿ 22ರ ರವಿವಾರದಂದು ಅಟ್ಲಾಂಟದಲ್ಲಿ ನೆಲಸಿರುವ...

AIM India Forum Delegation Meets Indian Ambassador to UAE

Abu Dhabi: A delegation from AIM India Forum met...

Related Articles

Popular Categories