ಯುಎಇಜನವರಿ 25ರಂದು ಶಾರ್ಜಾದಲ್ಲಿ 'ಕೆಸಿಎಫ್'ನಿಂದ 'ಮಹಬ್ಬಾ ಫ್ಯಾಮಿಲಿ ಫೆಸ್ಟ್-2026'

ಜನವರಿ 25ರಂದು ಶಾರ್ಜಾದಲ್ಲಿ ‘ಕೆಸಿಎಫ್’ನಿಂದ ‘ಮಹಬ್ಬಾ ಫ್ಯಾಮಿಲಿ ಫೆಸ್ಟ್-2026’

ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ಯುಎಇಯ ಆಶ್ರಯದಲ್ಲಿ ‘ಮಹಬ್ಬಾ ಫ್ಯಾಮಿಲಿ ಫೆಸ್ಟ್ 2026’ ಜನವರಿ 25ರ ರವಿವಾರದಂದು ಶಾರ್ಜಾದ ಅಲ್ ಬತಾಯೆ ಗಾರ್ಡೆನ್ ನಲ್ಲಿ ನಡೆಯಲಿದೆ.

ಬೆಳಗ್ಗೆ 8ರಿಂದ ಸಂಜೆ 8ರವರೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಯುಎಇಯ ವಿವಿಧ ಎಮಿರೇಟುಗಳಿಂದ ಕನ್ನಡಿಗ ಕುಟುಂಬಗಳು ಭಾಗವಹಿಸಲಿವೆ ಎಂದು ಕೆಸಿಎಫ್ ಯುಎಇ ಅಧ್ಯಕ್ಷ ಕೇದುಂಬಾಡಿ ಇಬ್ರಾಹಿಂ ಸಖಾಫಿ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಅವರು, ಕುಟುಂಬಗಳನ್ನು ಒಗ್ಗೂಡಿಸಿ ಸಾಮಾಜಿಕ ಬಾಂಧವ್ಯವನ್ನು ಬಲಪಡಿಸುವುದೇ ಈ ಫೆಸ್ಟ್‌ನ ಮುಖ್ಯ ಉದ್ದೇಶವೆಂದರು. ಮಕ್ಕಳ ಗೀತಗಾನ, ಮಕ್ಕಳ ಆಟೋಪಾಟಗಳು, ಮಹಿಳೆಯರ ಅಡುಗೆ ಸ್ಪರ್ಧೆ, ವಿವಿಧ ವಯೋವರ್ಗಗಳಿಗೆ ಮನರಂಜನಾ ಹಾಗೂ ಕ್ರೀಡಾ ಕಾರ್ಯಕ್ರಮಗಳು ಫೆಸ್ಟ್‌ನ ಪ್ರಮುಖ ಆಕರ್ಷಣೆಯಾಗಿರಲಿವೆ ಎಂದರು.

ಸುಮಾರು 500ಕ್ಕೂ ಅಧಿಕ ಕುಟುಂಬಗಳು ಹಾಗೂ 3,000ಕ್ಕೂ ಹೆಚ್ಚು ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಅನೇಕ ಸಮಾಜಮುಖಿ ನಾಯಕರು ಮತ್ತು ಗಣ್ಯ ಅತಿಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಎಲ್ಲಾ ಎಮಿರೇಟುಗಳಿಂದ ಕುಟುಂಬಗಳು ಸುಲಭವಾಗಿ ಭಾಗವಹಿಸಲು ಝೋನಲ್ ತಂಡಗಳ ಮೂಲಕ ಬಸ್ ಸೌಲಭ್ಯ ಕಲ್ಪಿಸಲಾಗಿದ್ದು, ಕಾರ್ಯಕ್ರಮ ಸ್ಥಳದ ಸಮೀಪ ಸಾಕಷ್ಟು ಪಾರ್ಕಿಂಗ್ ಸೌಲಭ್ಯವೂ ಲಭ್ಯವಿದೆ ಎಂದು ಮಾಹಿತಿ ನೀಡಿದರು.

ಕೆಸಿಎಫ್ ಯುಎಇ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ (ಬ್ರೈಟ್ ಮಾರ್ಬಲ್) ಮಾತನಾಡಿ, ಯುಎಇ ಸರ್ಕಾರವು 2026ನ್ನು ‘ಕುಟುಂಬ ವರ್ಷ’ವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ, ಕುಟುಂಬದ ಏಕತೆ ಹಾಗೂ ಬೆಳವಣಿಗೆಯನ್ನು ಉದ್ದೇಶಿಸಿದ ಈ ಕಾರ್ಯಕ್ರಮಕ್ಕೆ ವಿಶೇಷ ಮಹತ್ವವಿದೆ ಎಂದು ಹೇಳಿದರು. ಎಲ್ಲ ಕರ್ನಾಟಕ ಕುಟುಂಬಗಳು ಈ ಫೆಸ್ಟ್‌ನಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.

ಮಹಬ್ಬಾ ಫ್ಯಾಮಿಲಿ ಫೆಸ್ಟ್ ಸ್ವಾಗತ ಸಮಿತಿ ಅಧ್ಯಕ್ಷ ಸಿದ್ದೀಖ್ ಪಾಣೆಮಂಗಳೂರು, ಸಂಚಾಲಕ ನವಾಝ್ ಕೊಟ್ಟೇಕಾರ್ ಸೇರಿದಂತೆ ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Hot this week

ಖತರ್‌ ಕರ್ನಾಟಕ ಸಂಘದಿಂದ ‘ತಾಯಂದಿರ ದಿನ 2026’ ಆಚರಣೆ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)...

ಮೇ 15ರಂದು ಬಹರೈನ್ ಕನ್ನಡ ಸಂಘದ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ

ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ಅಲ್ ಹಿಲಾಲ್ ಹೆಲ್ತ್ ಕೇರ್ ಗ್ರೂಪ್...

KCWA holds General Body Meeting in Kuwait, announces major cultural event in December

Kuwait City: Kuwait Canara Welfare Association (KCWA) held its...

ನ್ಯೂಯಾರ್ಕ್; ಆಲ್ಬನಿ ಕನ್ನಡಿಗರಿಂದ ಮಸಾಲ ದೋಸೆ ಬ್ರಂಚ್: ಹಿಂದೂ ದೇವಾಲಯಕ್ಕೆ ಧನ ಸಹಾಯ

ನ್ಯೂಯಾರ್ಕ್ ರಾಜ್ಯದ ರಾಜಧಾನಿ ಅಲ್ಬನಿಯಲ್ಲಿರುವ ಕನ್ನಡಿಗರು, ಇತ್ತೀಚೆಗೆ ಇಲ್ಲಿರುವ ಹಿಂದೂ ದೇವಸ್ಥಾನದಲ್ಲಿ...

ದ್ವೀಪ ರಾಷ್ಟ್ರ ಬಹರೈನ್‌ನಲ್ಲಿ ಸಾರ್ಥಕೆತೆಯನ್ನು ಕಂಡ ಮಂಗಳೂರಿನ ಹೃದಯವಂತ ಅಮರನಾಥ್ ರೈ!

ಬಹರೈನ್‌: ಪ್ರಾಮಾಣಿಕತೆ ಮತ್ತು ದುಡಿಮೆ—ಈ ಎರಡು ಮೌಲ್ಯಗಳು ಒಬ್ಬನ ಬದುಕನ್ನು ಎಷ್ಟು...

Related Articles

Popular Categories