ಸೌದಿ ಅರೇಬಿಯಾಜಿದ್ದಾ ವಿಮಾನ ನಿಲ್ದಾಣದಲ್ಲಿ ಮಂಗಳೂರಿಗೆ ಹೊರಟಿದ್ದ ವ್ಯಕ್ತಿ ಹೃದಯಾಘಾತದಿಂದ...

ಜಿದ್ದಾ ವಿಮಾನ ನಿಲ್ದಾಣದಲ್ಲಿ ಮಂಗಳೂರಿಗೆ ಹೊರಟಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

ಸೌದಿ: ಗುರುವಾರ ರಾತ್ರಿ ಜಿದ್ದಾದಿಂದ ಮಂಗಳೂರಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಪ್ರಯಾಣಿಸಬೇಕಿದ್ದ ಬೆಳ್ತಂಗಡಿಯ ಹಿದಾಯತ್ ಎಂಬವರು ಜಿದ್ದಾ ವಿಮಾನ ನಿಲ್ದಾಣದಲ್ಲಿಯೇ ಹೃದಯಾಘಾತದಿಂದ ಮೃತರಾಗಿರುವ ಘಟನೆ ವರದಿಯಾಗಿದೆ.

ನಿನ್ನೆ ರಾತ್ರಿ 8:10ರ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಬೇಕಿದ್ದ ಬೆಳ್ತಂಗಡಿ ಸಂಜಯನಗರ ನಿವಾಸಿ ಹಿದಾಯತ್ ಗೆ, ಜಿದ್ದಾ ಏರ್ ಪೋರ್ಟ್ ತಲುಪುತ್ತಿದ್ದಂತೆ ಎದೆ ನೋವು ಕಾಣಿಸಿಕೊಂಡಿತು. ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೃತರು ತಂದೆ-ತಾಯಿ, ಪತ್ನಿ ಹಾಗೂ ಒಂದು ಗಂಡು, ಮೂರು ಹೆಣ್ಣು ಮಕ್ಕಳು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Hot this week

ದುಬೈ; ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನಲ್ಲಿ ಓಣಂ ಹಬ್ಬ ಆಚರಣೆ

ದುಬೈ : ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಫಾರ್ಚೂನ್ ಗ್ರೂಪ್...

ಕನ್ನಡಿಗರ ಕೂಟ ದುಬೈ ವತಿಯಿಂದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್‌ಗೆ ಸನ್ಮಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ತಂಡವು ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ...

ಫ್ಲೋರಿಡಾ ತುಳು ಕೂಟದ 2ನೇ ವಾರ್ಷಿಕ ಪೊಟ್ಲಕ್ ಪಿಕ್ನಿಕ್ ಸಂಭ್ರಮ

ಅಮೇರಿಕದ ಫ್ಲೋರಿಡಾ ತುಳು ಕೂಟವು ಇತ್ತೀಚೆಗೆ ಕ್ಯಾಸೆಲ್‌ಬೆರ್ರಿ ಒರ್ಲಾಂಡೊದಲ್ಲಿ ತನ್ನ ಎರಡನೇ...

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

Related Articles

Popular Categories