ಯುಎಇಫೆಬ್ರವರಿ 1ರಂದು ಶಾರ್ಜಾದಲ್ಲಿ 'ಮಾರ್ಗದೀಪ ಪ್ರೀಮಿಯರ್ ಲೀಗ್-4' ಕ್ರಿಕೆಟ್...

ಫೆಬ್ರವರಿ 1ರಂದು ಶಾರ್ಜಾದಲ್ಲಿ ‘ಮಾರ್ಗದೀಪ ಪ್ರೀಮಿಯರ್ ಲೀಗ್-4’ ಕ್ರಿಕೆಟ್ ಟೂರ್ನಮೆಂಟ್; ಜರ್ಸಿ ಬಿಡುಗಡೆ

ದುಬೈ: ಮಾರ್ಗದೀಪ ಸಾಂಸ್ಕೃತಿಕ ಸಮಿತಿಯ ವತಿಯಿಂದ ದಿವಂಗತ ವಸಂತ್ ಬೇಕಲ್ ಸ್ಮರಣಾರ್ಥ ನಡೆಯುವ ಮಾರ್ಗದೀಪ ಪ್ರೀಮಿಯರ್ ಲೀಗ್-4 (MPL-Season-4) ಕ್ರಿಕೆಟ್ ಟೂರ್ನಮೆಂಟ್ ನ ಜರ್ಸಿ ಬಿಡುಗಡೆ ಇತ್ತೀಚೆಗೆ ನಡೆಯಿತು.

ದುಬೈನ ಎಂ.ಎಂ.ಸಿ.ಟಿ.ಗ್ರೌಂಡ್ ನಲ್ಲಿ ನಡೆದ ಜರ್ಸಿ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉದ್ಯಮಿ ರೋಷನ್ ಕಂಪ, ರಾಮಕ್ಷತ್ರಿಯ ಸಂಘ ಯುಎಇ ಅಧ್ಯಕ್ಷರಾದ ಈಶ್ವರ್ ಬಲ್ಕಿ, ರಕ್ಷಿತ್ ಪುತ್ತೂರು, ರೇಷ್ಮಾ ಹಾಗೂ ವೇದ, ಸಂತೋಷ್ ಶೆಟ್ಟಿ ಪೊಳಲಿ ಬಿಡುಗಡೆಗೊಳಿಸಿದರು.

ಮಹೇಶ್ ಚಂದ್ರಗಿರಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸುಗಂಧರಾಜ ಬೇಕಲ್ ಸ್ವಾಗತಿಸಿದರು. ಸ್ಪೋರ್ಟ್ಸ್ ಕಾರ್ಯದರ್ಶಿ ಸುಬ್ರಹ್ಮಣ್ಯ ಕುದುರೆಕೋಡು ಕಾರ್ಯಕ್ರಮದ ಜವಾಬ್ದಾರಿಯನ್ನು ವಹಿಸಿದರು. ಫೆಬ್ರವರಿ 1ರಂದು ಶಾರ್ಜಾದ ಬತಾಯ ಮೈದಾನದಲ್ಲಿ ಪಂದ್ಯಾಟ ನಡೆಯಲಿದೆ.

ಬಿಡುಗಡೆ ಕಾರ್ಯಕ್ರಮವನ್ನು ಹರಿಕೋಟೆ ನಿರೂಪಿಸಿದರು. ಮಾರ್ಗದೀಪ ಸಾಂಸ್ಕೃತಿಕ ಸಮಿತಿಯ ಉಪಾಧ್ಯಕ್ಷರಾದ ಪ್ರವೀಣ್ ಉಪ್ಪೂರು, ಕಾರ್ಯದರ್ಶಿ ಸುನೀಲ್ ರಾವ್, ರಾಜೇಶ್ ರಾವ್, ಅಜೀತ್ ಕೊರಕಾಡ್ ಹಾಗೂ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Hot this week

ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ವಾರ್ಷಿಕ ಮಹಾಸಭೆ

ದುಬೈ: ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ಇದರ 28ನೇ ವಾರ್ಷಿಕ ಮಹಾಸಭೆ...

ದುಬೈಯಲ್ಲಿ ಕನ್ನಡ ಭಾಷೆಯನ್ನು ಎತ್ತಿ ಹಿಡಿದ ಕ್ರಿಯಾತ್ಮಕ ಕಲಾ ನಿರ್ದೇಶಕ ಬಿ.ಕೆ.ಗಣೇಶ್ ರೈ

ಜಗತ್ತಿನ ನಾನಾ ಮೂಲೆಗಳಲ್ಲಿ ನೆಲೆಸಿರುವ ಕನ್ನಡಿಗರು ಕನ್ನಡ ನಾಡು-ನುಡಿ, ಸಂಸ್ಕೃತಿ, ಪರಂಪರೆಗಾಗಿ...

ಜರ್ಮನಿ; ನಾಟ್ಯಫೆಸ್ಟ್ 2026: ಸಂಸ್ಕೃತಿ ಮತ್ತು ಸೃಜನಾತ್ಮಕತೆಯ ರಂಜಕ ವೇದಿಕೆ

ಫ್ರಾಂಕ್‌ಫರ್ಟ್‌ (ಜರ್ಮನಿ): ಇತ್ತೀಚೆಗೆ ಮ್ಯೂನಿಕ್‌ನ ಐನ್‌ಸ್ಟೈನ್ ಕಲ್ಚರ್ ವೇದಿಕೆ ನಾಟ್ಯಫೆಸ್ಟ್ 2026...

ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ದೋಹಾ(ಖತರ್‌): ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ...

ಜರ್ಮನಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಜಾನಪದ ವೈಭವ; ಸಂಸ್ಕೃತಿಯ ಗತ ವೈಭವ ಸೃಷ್ಟಿ

ಜರ್ಮನಿ: ರೈನ್ ಮೈನ್ ಕನ್ನಡ ಸಂಘದಿಂದ ಇದೇ ಮೊದಲ ಬಾರಿಗೆ ಶನಿವಾರ...

Related Articles

Popular Categories