ಒಮಾನ್ನಾಳೆ ಒಮಾನಿನಲ್ಲಿ 'ಮಸ್ಕತ್ ಗಡಿನಾಡ ಉತ್ಸವ-2025' ಸಾಂಸ್ಕೃತಿಕ ಕಾರ್ಯಕ್ರಮ;...

ನಾಳೆ ಒಮಾನಿನಲ್ಲಿ ‘ಮಸ್ಕತ್ ಗಡಿನಾಡ ಉತ್ಸವ-2025’ ಸಾಂಸ್ಕೃತಿಕ ಕಾರ್ಯಕ್ರಮ; ಆಮಂತ್ರಣ ಪತ್ರಿಕೆ ಅನಾವರಣ

ಮಸ್ಕತ್: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು, ಒಮಾನ್ ಘಟಕ ಮಸ್ಕತ್ ಹಾಗೂ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ ಮತ್ತು ಒಮಾನಿನ ಎಲ್ಲಾ ಕನ್ನಡ ಪರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಏಪ್ರಿಲ್ 18ರಂದು ಮಸ್ಕತ್ ನ ಮಜಾನ್ ಹೈಟ್ಸ್ ಸಭಾಂಗಣದಲ್ಲಿ ನಡೆಯುವ ಮಸ್ಕತ್ ಗಡಿನಾಡ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಅಲ್ ಕುವೆರ್ ಗೋಕುಲ್ ಹೋಟೆಲ್ ಸಭಾಂಗಣದಲ್ಲಿ ಹಿರಿಯ ಆರ್ಥಿಕ ತಜ್ಞ ಸಿ.ಎ.ರಮಾನಂದ ಪ್ರಭು ಅನಾವರಣ ಗೊಳಿಸಿದರು.

ಸಮಾರಂಭದಲ್ಲಿ ಬ್ಯಾಂಕ್ ದೋಫಾರ್’ನ ಹಿರಿಯ ಅಧಿಕಾರಿ ಜಿ.ವಿ.ರಾಮಕೃಷ್ಣ, ಒಮಾನ್ ಇಂಡಿಯನ್ ಸೋಶಿಯಲ್ ಕ್ಲಬ್’ನ ಆಡಳಿತ ಮಂಡಳಿ ಸದಸ್ಯ ಎಸ್.ಡಿ.ಟಿ ಪ್ರಸಾದ್, ಮಸ್ಕತ್ ಕನ್ನಡ ಸಂಘದ ಅಧ್ಯಕ್ಷ ಮಂಜುನಾಥ ಸಂಗಟ್ಟಿ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಒಮಾನ್ ಘಟಕದ ಅಧ್ಯಕ್ಷ ಅಬೂಬಕರ್ ರೋಯಲ್ ಬೊಳ್ಳಾರ್, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಒಮಾನ್ ಘಟಕದ ಸಲಹಾ ಸಮಿತಿ ಸದಸ್ಯ ಶಿವಾನಂದ ಕೋಟ್ಯಾನ್, ಯುವರಾಜ್ ಸಾಲಿಯಾನ್, ಹಿತೇಶ್ ಮಂಗಳೂರು, ರೇಷ್ಮಾ ಹಿತೇಶ್, ನ್ಯೂ ವೈಬ್ರೆಂಟ್ ಪಿಯು ಕಾಲೇಜ್ ಮೂಡಬಿಡದಿರೆಯ ನಿರ್ದೇಶಕ ಅಮರೇಶ ವಾಟಗಲ್, ಸಮಾಜ ಸೇವಕರಾದ ಪದ್ಮಾಕರ ಮೆಂಡನ್, ರವಿ ಅಚಾರ್ಯ, ಭಾಸ್ಕರ್ ಕೋಟ್ಯನ್ , ಪ್ರಸಾದ್ ಮರಾಠೆ, ಕಾರ್ತಿಕ್ ಕುಂದರ್, ಅನಿಲ್ ಪೂಜಾರಿ, ಅಕ್ಷಯ್ ಮೂಡಬಿದ್ರೆ, ಶ್ವೇತಾ ಕೋಟ್ಯಾನ್ ಮುಂತಾದವರು ಉಪಸ್ಥಿತರಿದ್ದರು.

Hot this week

ಬಹರೈನ್: ಯಕ್ಷಗುರು ದೀಪಕ್ ರಾವ್ ಪೇಜಾವರರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಬಹರೈನ್: ಕಳೆದ ಒಂದು ದಶಕದಿಂದ ಬಹರೈನ್ ದ್ವೀಪರಾಷ್ಟ್ರದಲ್ಲಿ ನೆಲೆಸಿರುವ ಖ್ಯಾತ ಯಕ್ಷಗಾನ...

ನ್ಯೂಯಾರ್ಕ್ ಮೇಯರ್ ಆಗಿ ಭಾರತೀಯ ಮೂಲದ ಝೊಹ್ರಾನ್ ಮಮ್ದಾನಿ ಆಯ್ಕೆ ಸಂಭವ; ಗೆದ್ದರೆ, ಹಲವು ಇತಿಹಾಸ ಸೃಷ್ಟಿ!

ಜೂನ್ 24 ರಂದು ನಡೆದ ನ್ಯೂಯಾರ್ಕ್ ಮೇಯರ್ ಹುದ್ದೆಗೆ ಪಕ್ಷಗಳ ಅಭ್ಯರ್ಥಿಯ...

ಗಲ್ಫ್‌ನಲ್ಲಿ ಮತ್ತೆ ಕವಿದ ಯುದ್ಧದ ಕಾರ್ಮೋಡ; ವಲಸಿಗರನ್ನು ಕಾಡುತ್ತಿವೆ 1991ರ ಕೊಲ್ಲಿ ಯುದ್ಧದ ಕಹಿ ನೆನಪುಗಳು…!

ಇರಾನ್-ಇಸ್ರೇಲ್ ದಾಳಿಯಲ್ಲಿ ಅಮೇರಿಕ ನೇರವಾಗಿ ಭಾಗವಹಿಸುತ್ತಿರುವುದರಿಂದ , ಅಮೇರಿಕದ ಮಿತ್ರ ರಾಷ್ಟ್ರಗಳಾದ...

ಜೂನ್ 29ರಂದು ಯುಎಇ ಯಕ್ಷಗಾನ ಅಭ್ಯಾಸ ಕೇಂದ್ರದ ದಶಮಾನೋತ್ಸವ: 7 ಮಂದಿ ಸಾಧಕರಿಗೆ-ಮೂರು ಸಾಧಕ ಸಂಸ್ಥೆಗಳಿಗೆ ಸನ್ಮಾನ

ದುಬೈ:ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಕಾರ್ಯಕ್ರಮವು ಜೂನ್ 29ರಂದು...

Related Articles

Popular Categories