ಒಮಾನ್ನಾಳೆ ಒಮಾನಿನಲ್ಲಿ 'ಮಸ್ಕತ್ ಗಡಿನಾಡ ಉತ್ಸವ-2025' ಸಾಂಸ್ಕೃತಿಕ ಕಾರ್ಯಕ್ರಮ;...

ನಾಳೆ ಒಮಾನಿನಲ್ಲಿ ‘ಮಸ್ಕತ್ ಗಡಿನಾಡ ಉತ್ಸವ-2025’ ಸಾಂಸ್ಕೃತಿಕ ಕಾರ್ಯಕ್ರಮ; ಆಮಂತ್ರಣ ಪತ್ರಿಕೆ ಅನಾವರಣ

ಮಸ್ಕತ್: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು, ಒಮಾನ್ ಘಟಕ ಮಸ್ಕತ್ ಹಾಗೂ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ ಮತ್ತು ಒಮಾನಿನ ಎಲ್ಲಾ ಕನ್ನಡ ಪರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಏಪ್ರಿಲ್ 18ರಂದು ಮಸ್ಕತ್ ನ ಮಜಾನ್ ಹೈಟ್ಸ್ ಸಭಾಂಗಣದಲ್ಲಿ ನಡೆಯುವ ಮಸ್ಕತ್ ಗಡಿನಾಡ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಅಲ್ ಕುವೆರ್ ಗೋಕುಲ್ ಹೋಟೆಲ್ ಸಭಾಂಗಣದಲ್ಲಿ ಹಿರಿಯ ಆರ್ಥಿಕ ತಜ್ಞ ಸಿ.ಎ.ರಮಾನಂದ ಪ್ರಭು ಅನಾವರಣ ಗೊಳಿಸಿದರು.

ಸಮಾರಂಭದಲ್ಲಿ ಬ್ಯಾಂಕ್ ದೋಫಾರ್’ನ ಹಿರಿಯ ಅಧಿಕಾರಿ ಜಿ.ವಿ.ರಾಮಕೃಷ್ಣ, ಒಮಾನ್ ಇಂಡಿಯನ್ ಸೋಶಿಯಲ್ ಕ್ಲಬ್’ನ ಆಡಳಿತ ಮಂಡಳಿ ಸದಸ್ಯ ಎಸ್.ಡಿ.ಟಿ ಪ್ರಸಾದ್, ಮಸ್ಕತ್ ಕನ್ನಡ ಸಂಘದ ಅಧ್ಯಕ್ಷ ಮಂಜುನಾಥ ಸಂಗಟ್ಟಿ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಒಮಾನ್ ಘಟಕದ ಅಧ್ಯಕ್ಷ ಅಬೂಬಕರ್ ರೋಯಲ್ ಬೊಳ್ಳಾರ್, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಒಮಾನ್ ಘಟಕದ ಸಲಹಾ ಸಮಿತಿ ಸದಸ್ಯ ಶಿವಾನಂದ ಕೋಟ್ಯಾನ್, ಯುವರಾಜ್ ಸಾಲಿಯಾನ್, ಹಿತೇಶ್ ಮಂಗಳೂರು, ರೇಷ್ಮಾ ಹಿತೇಶ್, ನ್ಯೂ ವೈಬ್ರೆಂಟ್ ಪಿಯು ಕಾಲೇಜ್ ಮೂಡಬಿಡದಿರೆಯ ನಿರ್ದೇಶಕ ಅಮರೇಶ ವಾಟಗಲ್, ಸಮಾಜ ಸೇವಕರಾದ ಪದ್ಮಾಕರ ಮೆಂಡನ್, ರವಿ ಅಚಾರ್ಯ, ಭಾಸ್ಕರ್ ಕೋಟ್ಯನ್ , ಪ್ರಸಾದ್ ಮರಾಠೆ, ಕಾರ್ತಿಕ್ ಕುಂದರ್, ಅನಿಲ್ ಪೂಜಾರಿ, ಅಕ್ಷಯ್ ಮೂಡಬಿದ್ರೆ, ಶ್ವೇತಾ ಕೋಟ್ಯಾನ್ ಮುಂತಾದವರು ಉಪಸ್ಥಿತರಿದ್ದರು.

Hot this week

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

ಬಹರೈನ್‌; ‘ಕೆಸಿಎಫ್’ನಿಂದ ಈದ್ ಮಿಲಾದ್ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ

ಮನಾಮ: ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್) ಬಹರೈನ್‌ ವತಿಯಿಂದ ಪ್ರವಾದಿ ಮುಹಮ್ಮದ್‌ರವರ...

ಅಮೇರಿಕ; ಭಕ್ತಿ, ಬಸವತತ್ವ, ನಾಟಕ-ನೃತ್ಯ ವೈಭವದಿಂದ ಕಂಗೊಳಿಸಿದ VSNA ಮಹಾಸಮ್ಮೇಳನದ ಎರಡನೇ ದಿನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಸ್ಯಾನ್‌ಫೋರ್ಡ್ (ಉತ್ತರ ಕೆರೊಲಿನಾ: 48ನೇ ವೀರಶೈವ ಸೊಸೈಟಿ...

ಕನ್ನಡ ಸಂಘ ಬಹರೈನ್‌ನ ‘ಯಕ್ಷ ವೈಭವ 2026’ ಮುಹೂರ್ತ ಪೂಜೆ ಸಂಪನ್ನ

ಬಹರೈನ್‌: ಕನ್ನಡ ಸಂಘ ಬಹರೈನ್ ಅರ್ಪಿಸುವ ‘ಯಕ್ಷ ವೈಭವ 2026’ ರ...

ಅಮೇರಿಕ; ಉತ್ತರ ಕೆರೊಲಿನಾದಲ್ಲಿ 48ನೇ ವಿಎಸ್‌ಎನ್‌ಎ ಮಹಾಸಮ್ಮೇಳನಕ್ಕೆ ಅದ್ದೂರಿ ಚಾಲನೆ

-ಬೆಂಕಿ ಬಸಣ್ಣ, ಉತ್ತರ ಕೆರೊಲಿನಾ ಉತ್ತರ ಅಮೇರಿಕದ ವೀರಶೈವ-ಲಿಂಗಾಯತ ಸಮುದಾಯದ ಅತ್ಯಂತ ಹಿರಿಯ...

Related Articles

Popular Categories