Lead Newsಇಂದು (ಜ.17) ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟದಿಂದ 'ಹೊಸಬೆಳಕು'...

ಇಂದು (ಜ.17) ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟದಿಂದ ‘ಹೊಸಬೆಳಕು’ ಕಾರ್ಯಕ್ರಮ; ಮೋಡಿ ಮಾಡಲಿದ್ದಾರೆ ರಾಜೇಶ್ ಕೃಷ್ಣನ್

ಅಮೇರಿಕ: ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟವು ಸಂಕ್ರಾಂತಿ ಹಿನ್ನೆಲೆಯಲ್ಲಿ ಇಂದು(ಜನವರಿ 17) ಟ್ಯಾಂಪಾ ನಗರದ ಇಂಡಿಯನ್ ಕಲ್ಚರಲ್ ಸೆಂಟರ್ ನಲ್ಲಿ ‘ಹೊಸಬೆಳಕು’ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದೆ.

ಮಧ್ಯಾಹ್ನ 12 ಗಂಟೆಯಿಂದ ಆರಂಭವಾಗಲಿರುವ ಕಾರ್ಯಕ್ರಮವು ರಾತ್ರಿ 11ರ ವರಗೆ ನಡೆಯಲಿದೆ. ಪ್ರಸಿದ್ಧ ಗಾಯಕ ಮೆಲೋಡಿ ಕಿಂಗ್ ರಾಜೇಶ್ ಕೃಷ್ಣನ್ ಅವರಿಂದ ರಾತ್ರಿ 7.30ರಿಂದ 11ರ ವರಗೆ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಯುನಿವರ್ಸಿಟಿ ಆಫ್ ಸೌತ್ ಫ್ಲೋರಿಡಾ(USF)ದ ಪ್ರಾಧ್ಯಾಪಕ ಡಾ.ಗಿಲ್ ಬೆನ್-ಹೆರೂಟ್, ಲೂಯಿಸ್ ವಿಯೇರಾ (ಟ್ಯಾಂಪಾ ಸಿಟಿ ಕೌನ್ಸಿಲ್) ಅವರು ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12ಗಂಟೆಗೆ ಮುಖ್ಯ ಅರ್ಚಕರಾದ ಗುರುದತ್ ಅವರಿಂದ ವೇದಘೋಷ ನೆರವೇರಲಿದೆ. ಅನಂತರ ಕರ್ನಾಟಕ ಶೈಲಿ ಬಾಳೆ ಎಲೆ ಊಟ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 2ಗಂಟೆಯಿಂದ ಸಂಜೆ 6ರ ವರಗೆ ಸ್ಥಳೀಯ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮ, ಬಳಿಕ ಸಂಕ್ರಾಂತಿ ವಿಶೇಷ – ಲಘು ಭೋಜನ ಅನಂತರ ರಾಜೇಶ್ ಕೃಷ್ಣನ್ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟದ ಅಧ್ಯಕ್ಷ ಹರ್ಷಿತ್ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಬಹರೈನ್; ಆಗಸ್ಟ್ 21ರಂದು ‘ಕೆಸಿಎಫ್’ನಿಂದ ಗ್ರ್ಯಾಂಡ್ ಮೀಲಾದ್ ಕಾನ್ಫರೆನ್ಸ್

ಮನಾಮ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ...

ಭಾರತೀಯ ರಾಯಭಾರ ಕಚೇರಿಯ ಡಾ.ಈಶ್ ಸಿಂಘಾಲ್​​ಗೆ ಭಾವಪೂರ್ಣ ಬೀಳ್ಕೊಡುಗೆ; ಕರ್ನಾಟಕ ಸಂಘ ಖತರ್‌ನಿಂದ ಅಭಿನಂದನೆ

ದೋಹಾ(ಖತರ್): ಖತರ್‌ನಲ್ಲಿ ತಮ್ಮ ಸೇವಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಭಾರತೀಯ ರಾಯಭಾರ ಕಚೇರಿಯ...

ವಂದೇ ಮಾತರಂ ಮತ್ತು ಜನಗಣಮನ ಗೀತೆಯೊಂದಿಗೆ ಅಮೇರಿಕದಲ್ಲಿ ಗೃಹಪ್ರವೇಶ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ 1875ರಲ್ಲಿ ಭಾರತದಲ್ಲಿ ಮೊಳಗಿದ ‘ವಂದೇ ಮಾತರಂ’ 150...

ದುಬೈ; ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಸಾಮಾಜಿಕ ಸಮ್ಮಿಲನ ಕಾರ್ಯಕ್ರಮ

ದುಬೈ: ಪರಿಸರ ಸಂರಕ್ಷಣೆ, ಸಾಮಾಜಿಕ ಜಾಗೃತಿ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಬದ್ಧವಾಗಿರುವ...

ನ್ಯೂಯಾರ್ಕ್; ಆಲ್ಬನಿಯಲ್ಲಿ ಸಂಭ್ರಮದ ಕನ್ನಡ ಕಲಿ ಪದವಿ ಪ್ರದಾನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಆಲ್ಬನಿ(ನ್ಯೂಯಾರ್ಕ್): ಅಮೇರಿಕದಲ್ಲಿ ಹುಟ್ಟಿ ಬೆಳೆಯುತ್ತಿರುವ ಮಕ್ಕಳಿಗೆ ಕನ್ನಡ...

Related Articles

Popular Categories