ಯುಎಇ'ಅನಿವಾಸಿಗಳ ಕಾರ್ಯಕ್ರಮಕ್ಕೆ, ಸಾಧನಶೀಲರ ಪರಿಚಯಕ್ಕೆ, ಕಾರ್ಮಿಕರ ಸುಖ ದುಃಖಗಳಿಗೆ...

‘ಅನಿವಾಸಿಗಳ ಕಾರ್ಯಕ್ರಮಕ್ಕೆ, ಸಾಧನಶೀಲರ ಪರಿಚಯಕ್ಕೆ, ಕಾರ್ಮಿಕರ ಸುಖ ದುಃಖಗಳಿಗೆ ವೇದಿಕೆಯಾಗಲಿ’

globalkannadiga.comಗೆ ಇರ್ಷಾದ್ ಮೂಡಬಿದ್ರೆ ಶುಭ ಹಾರೈಕೆ

ಹೊಸ ಪ್ರಯೋಗ…
ಇಂದು ಸಮಸ್ತ ಗಲ್ಫ್ ವಾಸಿಗಳ ಹೆಚ್ಚಿನ ಮೊಬೈಲ್’ಗಳನ್ನು ಅವಲೋಕಿಸಿದರೆ ಅದರಲ್ಲಿ ಕಾಣಸಿಗುವ ಪತ್ರಿಕೆ ಎಂದರೆ ವಾರ್ತಾ ಭಾರತಿ. ಮುಂಜಾನೆ ನಾವು ಎದ್ದೇಳುವ ಮುನ್ನವೇ ಬಿಸಿಬಿಸಿ ಚಹಾದಂತೆ ಸಿದ್ಧವಾಗಿರುವ ಈ ಪತ್ರಿಕೆಯು ಎಲ್ಲರಿಗೂ ಅಚ್ಚುಮೆಚ್ಚು. ಊರಿನ, ರಾಜ್ಯದ, ದೇಶ-ವಿದೇಶಗಳ ಸುದ್ದಿಯನ್ನು ಇಡೀ ದಿನ ಬಿತ್ತರಿಸುವ ಅದು ಎಲ್ಲರ ಆಪ್ತ ಸಂಗಾತಿ. ಆಗಾಗ ‘ವಿಬಿ'(ವಾರ್ತಾ ಭಾರತಿ) ಮೇಲೆ ಕಣ್ಣಾಡಿಸದಿದ್ದರೆ ಸಮಾಧಾನವೇ ಇಲ್ಲ. ಈಗ ಒಂದು ಹೆಜ್ಜೆ ಮುಂದಿಟ್ಟಿರುವ ಅದು ಕನ್ನಡಿಗರಿಗಾಗಿ globalkannadiga.com ಎಂಬ ಹೊಸ ವೆಬ್ ಸೈಟನ್ನು ಆರಂಭಿಸುವ ಸಿಹಿ ಸುದ್ದಿಯನ್ನು ನೀಡಿದೆ. ಆರಂಭದ ದಿನಗಳಿಂದಲೇ ಅದು ವಿದೇಶ ಭಾಗದಲ್ಲಿ ಗಲ್ಫ್ ರಾಷ್ಟ್ರಗಳ ಮುಖ್ಯ ಸುದ್ದಿಗಳಿಗೆ ಪ್ರಾಮುಖ್ಯತೆ ನೀಡುತ್ತಾ ಇತ್ತು. ಅಂದಿನ ದಿನಗಳಲ್ಲಿ ಅದು ಯಾವ ಪತ್ರಿಕೆಯು ಮಾಡದ ಹೊಸ ಹಾಗು ಉಪಯುಕ್ತ ಪ್ರಯೋಗವಾಗಿತ್ತು. ಇದರಿಂದ ನಾಡಿನ ಜನತೆಗೆ ಹಲವು ವಿಚಾರಗಳು ತಿಳಿಯುವ ಅವಕಾಶ ದೊರೆಯಿತು. ಮುಂದೆ ಗಲ್ಫ್ ನಾಡಿನ ಅನಿವಾಸಿಗಳ ಆಗುಹೋಗುಗಳ ಕುರಿತಾಗಿ ದುಬೈಯಿಂದ ನಾನು ಅದರಲ್ಲಿ ‘ಮರಳ ಹೆಜ್ಜೆಗಳು’ ಎನ್ನುವ ಅಂಕಣವನ್ನೂ ಬರೆಯುತ್ತಿದ್ದೆ. ಈಗ ಜಗತ್ತಿನಾದ್ಯಂತ ಇರುವ ಸಮಸ್ತ ಅನಿವಾಸಿ ಕನ್ನಡಿಗರಿಗೆ ಹೊಸ ವೇದಿಕೆ ನೀಡುವ globalkannadiga.com ವೆಬ್ ಸೈಟ್ ಬರಲಿದೆ ಎಂದು ಕೇಳಿದೆ. ತುಂಬಾ ಸಂತೋಷಕರ ಸುದ್ದಿ. ಇದು ಅನಿವಾಸಿಗಳ ಕಾರ್ಯಕ್ರಮಗಳಿಗೆ, ಸಾಧನಶೀಲರ ಪರಿಚಯಕ್ಕೆ, ಕಾರ್ಮಿಕರ ಸುಖ ದುಃಖಗಳಿಗೆ, ಸಭೆ-ಸಮಾರಂಭಗಳ ಮುನ್ನೋಟಕ್ಕೆ ವೇದಿಕೆಯಾಗಲಿ. ವಿಬಿ ಇದರಲ್ಲೂ ಜಾಗತಿಕ ಯಶಸ್ಸು ಕಾಣಲಿ, ಎಲ್ಲರ ಮನಸ್ಸು ಗೆಲ್ಲಲಿ, ನನ್ನ ಶುಭ ಹಾರೈಕೆಗಳು.

ಇರ್ಷಾದ್ ಮೂಡಬಿದ್ರೆ ದುಬೈ,(ಬರಹಗಾರ)

Hot this week

ಕೊಲ್ಲಿ ಯುದ್ಧ; ಗಲ್ಫ್ ರಾಷ್ಟ್ರಗಳಲ್ಲಿ ಅಗತ್ಯವಸ್ತುಗಳ ಮೇಲೆ ಬೀರುತ್ತಿದೆ ಪರಿಣಾಮ!

ಸೌದಿ ಅರೇಬಿಯಾ: ಅಮೇರಿಕ-ಇಸ್ರೇಲ್ ಹಾಗೂ ಇರಾನ್ ಮಧ್ಯೆ ನಡುಯುತ್ತಿರುವ ಸಂಘರ್ಷವು ಮುಂದುವರಿಯುತ್ತಿರುವುದರಿಂದ...

ಸೌದಿ: ಅಲ್ ಖಮರ್ ವೆಲ್ಫೇರ್ ಅಸೋಸಿಯೇಷನ್‌ನಿಂದ ಇಫ್ತಾರ್ ಕೂಟ

ಸೌದಿ ಅರೇಬಿಯಾ: ರಮಝಾನ್ ಪವಿತ್ರ ತಿಂಗಳ ಅಂಗವಾಗಿ ಅಲ್ ಖಮರ್ ವೆಲ್ಫೇರ್...

Yakshagana staged in German for first time in Munich, children from Europe perform

Munich: In a significant moment for coastal Karnataka’s traditional...

ದುಬೈಯಲ್ಲಿ ಸಂಕಷ್ಟಕ್ಕೀಡಾಗಿರುವ ಪ್ರವಾಸಿ ಕನ್ನಡಿಗರಿಗೆ ಧೈರ್ಯ ತುಂಬಿದ ಎಂ.ಎ.ಗಫೂರ್

ದುಬೈ: ಅಮೇರಿಕ-ಇಸ್ರೇಲ್ ಹಾಗು ಇರಾನ್ ಮಧ್ಯೆಗಿನ ಸಂಘರ್ಷದಿಂದ ದುಬೈಯಲ್ಲಿ ಸಂಕಷ್ಟಕ್ಕೀಡಾಗಿರುವ ಕನ್ನಡಿಗ...

Related Articles

Popular Categories