ಇತರೆಒಮಾನ್ ಕರಾವಳಿಯಲ್ಲಿ ಮುಳುಗಿದ ತೈಲ ಟ್ಯಾಂಕರ್: 13 ಭಾರತೀಯರು...

ಒಮಾನ್ ಕರಾವಳಿಯಲ್ಲಿ ಮುಳುಗಿದ ತೈಲ ಟ್ಯಾಂಕರ್: 13 ಭಾರತೀಯರು ನಾಪತ್ತೆ

ಮಸ್ಕತ್: ಸೋಮವಾರ ಒಮನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮುಳುಗಿದ ಪ್ರಕರಣದಲ್ಲಿ 13 ಮಂದಿ ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ದೇಶದ ಸಾಗರ ಭದ್ರತಾ ಕೇಂದ್ರ ಪ್ರಕಟಿಸಿದೆ.‌

“ಪ್ರೆಸ್ಟೀಜ್ ಫಾಲ್ಕನ್” ಹೆಸರಿನ ಹಡಗಿನಲ್ಲಿ 13 ಮಂದಿ ಭಾರತೀಯರು ಮತ್ತು ಮೂವರು ಶ್ರೀಲಂಕನ್ನರು ಇದ್ದರು ಎಂದು ಒಮಾನಿ ಕೇಂದ್ರ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದೆ.

ಹಡಗು ಮಗುಚಿದ ಸ್ಥಿತಿಯಲ್ಲೇ ಇನ್ನೂ ಮುಳುಗಿಕೊಂಡಿದೆ ಎಂದು ಸಾಗರ ಭದ್ರತಾ ಕೇಂದ್ರ ಹೇಳಿದ್ದಾಗಿ ರಾಯ್ಟರ್ಸ್ ವರದಿ ಮಾಡಿದೆ. ಹಡಗಿನಿಂದ ಇನ್ನೂ ತೈಲ ಉತ್ಪನ್ನಗಳು ಸೋರಿಕೆಯಾಗುತ್ತಿವೆಯೇ ಎನ್ನುವುದು ಇನ್ನೂ ಸ್ಪಷ್ಟವಾಗಿ ತಿಳಿದಿಲ್ಲ.

ಶಿಪ್ಪಿಂಗ್ ವೆಬ್ ಸೈಟ್ ಮೆರಿಟ್ರಾಫಿಕ್.ಕಾಮ್ ಪ್ರಕಾರ, ದುಬೈನ ಹಮ್ರಿಯಾದಿಂದ ಹೊರಟ ಈ ಹಡಗು ಯೆಮನ್ ನ ಅಡೇನ್ ಬಂದರು ನಗರಕ್ಕೆ ಪ್ರಯಾಣಿಸುತ್ತಿತ್ತು. ನಾಲ್ಕು ದಿನ ಹಿಂದೆ ಇದರ ನಿಖರ ಸ್ಥಳದ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಪ್ರೆಸ್ಟೀಜ್ ಫಾಲ್ಕನ್ ಹಡಗು 117 ಮೀಟರ್ ಉದ್ದದ್ದಾಗಿದ್ದು, 2007ರಲ್ಲಿ ಈ ತೈಲ ಟ್ಯಾಂಕರ್ ನಿರ್ಮಿಸಲಾಗಿತ್ತು.

Hot this week

ಅಬುಧಾಬಿಗೆ ಸಚಿವ ಡಾ.ಜೈಶಂಕರ್ ಭೇಟಿ; ಕನ್ನಡಿಗರ ಕೂಟ ದುಬೈ-ಅಬುಧಾಬಿ ಕರ್ನಾಟಕ ಸಂಘ ಪ್ರತಿನಿಧಿತ್ವ

ಅಬುಧಾಬಿ: ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು...

ದುಬೈ; ‘ಬ್ಯಾರೀಸ್ ಪ್ರೀಮಿಯರ್ ಲೀಗ್-2026’ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕ್ರೌನ್ ಹೊನ್ನಾವರ; ನಫೀಸ್ ಗ್ರೂಪ್ ರನ್ನರ್ ಅಪ್

ದುಬೈ: ಶಾರ್ಜಾದ ಬಿಜೋಯ್ಸ್ ಕ್ರಿಕೆಟ್ ಕ್ರೀಡಾಗಂಣದಲ್ಲಿ ರವಿವಾರ ನಡೆದ 'ಬ್ಯಾರೀಸ್ ಪ್ರೀಮಿಯರ್...

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಆಯ್ಕೆ

ದುಬೈ: ಕರ್ನಾಟಕ ಸಂಘ ಶಾರ್ಜಾ ಇದರ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ...

ರಮಝಾನ್-ಈದುಲ್ ಫಿತ್ರ್ ಅಂಗವಾಗಿ ಕನ್ನಡ ಸಂಘ ಬಹರೈನ್ ವತಿಯಿಂದ ಆಹಾರ ವಸ್ತುಗಳ ಕಿಟ್ ವಿತರಣೆ

ಬಹರೈನ್: ಪವಿತ್ರ ರಮಝಾನ್ ಮತ್ತು ಈದುಲ್ ಫಿತ್ರ್ ಹಬ್ಬದ ಅಂಗವಾಗಿ ಪ್ರಸ್ತುತ...

Related Articles

Popular Categories