ಒಮಾನ್ಒಮಾನ್ ಕರಾವಳಿಯಲ್ಲಿ ಮುಳುಗಿದ ಹಡಗು: ಎಂಟು ಭಾರತೀಯರ ಸಹಿತ...

ಒಮಾನ್ ಕರಾವಳಿಯಲ್ಲಿ ಮುಳುಗಿದ ಹಡಗು: ಎಂಟು ಭಾರತೀಯರ ಸಹಿತ ಒಂಬತ್ತು ಮಂದಿಯ ರಕ್ಷಣೆ

ಹೊಸದಿಲ್ಲಿ: ಒಮನ್ ಕರಾವಳಿಯಲ್ಲಿ ಕಳೆದ ಭಾನುವಾರ ಮುಳುಗಿದ ಪ್ರೆಸ್ಟೀಜ್ ಫಾಲ್ಕನ್ ತೈಲ ಸಾಗಾಣಿಕೆ ಹಡಗಿನಲ್ಲಿದ್ದ 13 ಮಂದಿ ಭಾರತೀಯರ ಪೈಕಿ ಎಂಟು ಮಂದಿ ಸೇರಿದಂತೆ ಒಟ್ಟು ಒಂಬತ್ತು ಮಂದಿಯನ್ನು ರಕ್ಷಿಸಲಾಗಿದೆ. ರಕ್ಷಿಸಲ್ಪಟ್ಟ ಮತ್ತೊಬ್ಬ ಸಿಬ್ಬಂದಿ ಶ್ರೀಲಂಕಾ ಮೂಲದವರು ಎನ್ನಲಾಗಿದೆ.

“ಉಳಿದ ಸಿಬ್ಬಂದಿಯ ಹುಡುಕಾಟಕ್ಕಾಗಿ ಶೋಧ ಮತ್ತು ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ. ಈಗಾಗಲೇ ಪತ್ತೆಯಾಗಿರುವ ಎಲ್ಲ ಒಂಬತ್ತು ಮಂದಿ ಮಸ್ಕತ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜುಲೈ 14ರಂದು ರಾತ್ರಿ 10 ಗಂಟೆಯ ವೇಳೆಗೆ ಈ ಅವಘಡದ ಬಗ್ಗೆ ಪ್ರೆಸ್ಟೀಜ್ ಫಾಲ್ಕನ್ ಹಡಗಿನಿಂದ ಮಾಹಿತಿ ಸಿಕ್ಕಿತ್ತು. ಒಮಾನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಒಮಾನ್ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದು, ಶೋಧ ಕಾರ್ಯಾಚರಣೆಯಲ್ಲಿ ಭಾರತೀಯ ನೌಕಾಪಡೆ ಕೂಡಾ ಕೈಜೋಡಿಸಿದೆ.

ಒಮಾನ್ ಕರಾವಳಿಯ ರಾಸ್ ಮದ್ರಖಾದಿಂದ 25 ನಾಟಿಕಲ್ ಮೈಲು ದೂರದಲ್ಲಿ ಹಡಗು ಮುಳುಗಿತ್ತು. ಹಡಗು ಇನ್ನೂ ಮುಳುಗಿದ ಸ್ಥಿತಿಯಲ್ಲೇ ಇದೆ. ಇದರಲ್ಲಿ ಸಾಗಿಸಲಾಗುತ್ತಿದ್ದ ತೈಲ ಸಮುದ್ರಕ್ಕೆ ಸೋರಿಕೆಯಾಗಿದೆಯೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.

Hot this week

ಶಾಲೆಯ ಕ್ರೀಡಾಂಗಣದಿಂದ ಮುಖ್ಯಮಂತ್ರಿ ಕಚೇರಿವರೆಗೆ; ತಮ್ಮ ವಿದ್ಯಾರ್ಥಿ ಡಿ.ಕೆ. ಶಿವಕುಮಾರ್ ಕುರಿತು ನಿವೃತ್ತ ಶಿಕ್ಷಕ ಪಾಂಡು ಅವರ ನೆನಪುಗಳು

ಲೇಖನ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಇತಿಹಾಸವು ಮಹಾನ್ ನಾಯಕರನ್ನು ನೆನಪಿಸಿಕೊಳ್ಳುತ್ತದೆ. ಆದರೆ ಪ್ರತಿಯೊಬ್ಬ...

ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ವಾರ್ಷಿಕ ಮಹಾಸಭೆ

ದುಬೈ: ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ಇದರ 28ನೇ ವಾರ್ಷಿಕ ಮಹಾಸಭೆ...

ದುಬೈಯಲ್ಲಿ ಕನ್ನಡ ಭಾಷೆಯನ್ನು ಎತ್ತಿ ಹಿಡಿದ ಕ್ರಿಯಾತ್ಮಕ ಕಲಾ ನಿರ್ದೇಶಕ ಬಿ.ಕೆ.ಗಣೇಶ್ ರೈ

ಜಗತ್ತಿನ ನಾನಾ ಮೂಲೆಗಳಲ್ಲಿ ನೆಲೆಸಿರುವ ಕನ್ನಡಿಗರು ಕನ್ನಡ ನಾಡು-ನುಡಿ, ಸಂಸ್ಕೃತಿ, ಪರಂಪರೆಗಾಗಿ...

ಜರ್ಮನಿ; ನಾಟ್ಯಫೆಸ್ಟ್ 2026: ಸಂಸ್ಕೃತಿ ಮತ್ತು ಸೃಜನಾತ್ಮಕತೆಯ ರಂಜಕ ವೇದಿಕೆ

ಫ್ರಾಂಕ್‌ಫರ್ಟ್‌ (ಜರ್ಮನಿ): ಇತ್ತೀಚೆಗೆ ಮ್ಯೂನಿಕ್‌ನ ಐನ್‌ಸ್ಟೈನ್ ಕಲ್ಚರ್ ವೇದಿಕೆ ನಾಟ್ಯಫೆಸ್ಟ್ 2026...

ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ದೋಹಾ(ಖತರ್‌): ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ...

Related Articles

Popular Categories