Lead Newsಗಾಝಾ ಮಕ್ಕಳ ನರಮೇಧವನ್ನು ಕಟುವಾಗಿ ಖಂಡಿಸಿದ ಪೋಪ್‌ ಫ್ರಾನ್ಸಿಸ್‌

ಗಾಝಾ ಮಕ್ಕಳ ನರಮೇಧವನ್ನು ಕಟುವಾಗಿ ಖಂಡಿಸಿದ ಪೋಪ್‌ ಫ್ರಾನ್ಸಿಸ್‌

ವ್ಯಾಟಿಕನ್‌ ಸಿಟಿ: ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಿಂದಾಗಿ ಒಂದೇ ಕುಟುಂಬದ ಏಳು ಮಕ್ಕಳು ಮರಣ ಹೊಂದಿದ್ದಾರೆ ಎಂದು ಗಾಝಾದ ರಕ್ಷಣಾ ಸಂಸ್ಥೆಯೊಂದು ಹೇಳಿಕೆ ನೀಡಿದ ಒಂದು ದಿನದ ಬಳಿಕ ಈ ದಾಳಿಯನ್ನು ಕ್ರೈಸ್ತರ ಪರಮೋಚ್ಛ ನಾಯಕ ಪೋಪ್‌ ಫ್ರಾನ್ಸಿಸ್‌ ಕಟುವಾಗಿ ಖಂಡಿಸಿದ್ದಾರೆ. ಇದೊಂದು ಕ್ರೌರ್ಯವಾಗಿದೆ ಎಂದು ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಸ್ರೇಲಿ ವೈಮಾನಿಕ ದಾಳಿಯು ಶುಕ್ರವಾರ ಗಾಝಾದ ಉತ್ತರ ಭಾಗದಲ್ಲಿ ಏಳು ಮಕ್ಕಳು ಸೇರಿದಂತೆ ಒಂದು ಕುಟುಂಬದ 10 ಸದಸ್ಯರನ್ನು ಕೊಂದಿದೆ ಎಂದು ಗಾಝಾ ನಾಗರಿಕ ರಕ್ಷಣಾ ಸಂಸ್ಥೆಯು ವರದಿಯಲ್ಲಿ ತಿಳಿಸಿದೆ.

“ನಿನ್ನೆ ಅವರು ಈ ಹಿಂದೆ ವಾಗ್ದಾನ ಮಾಡಿದಂತೆ ಜನರನ್ನು ಗಾಝಾಕ್ಕೆ ಅನುಮತಿಸಲಿಲ್ಲ ಮಾತ್ರವಲ್ಲದೇ ಅವರು ಮಕ್ಕಳ ಮೇಲೆ ಬಾಂಬ್‌ ದಾಳಿ ನಡೆಸಿದ್ದಾರೆ. ಇದು ಯುದ್ಧವಲ್ಲ ಕ್ರೌರ್ಯ” ಎಂದು ಹೇಳಿದ ಪೋಪ್‌ ಫ್ರಾನ್ಸಿಸ್‌, “ಇದು ನನ್ನ ಹೃದಯವನ್ನು ಚುಚ್ಚುತ್ತದೆ, ಆದ್ದರಿಂದ ಈ ಮಾತನ್ನು ನಾನು ಹೇಳುತ್ತಿದ್ದೇನೆ” ಎಂದೂ ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.

ಇಸ್ರೇಲ್‌ ಸೈನ್ಯ ಮತ್ತು ಫ್ಯಾಲೆಸ್ತೀನ್‌ ನ ಹಮಾಸ್‌ ನಡುವೆ ಕದನ ವಿರಾಮ ತರುವ ಕುರಿತಾದಂತೆ ಹಲವು ಅಂತಾರಾಷ್ಟ್ರೀಯ ಮಧ್ಯವರ್ತಿಗಳು ಮಾತುಕತೆಗಳನ್ನು ನಡೆಸುತ್ತಿರುವ ಮಧ್ಯೆಯೇ ಈ ಬಾಂಬ್‌ ದಾಳಿ ನಡೆದಿದೆ.

Hot this week

ಅಜ್ಮಾನ್; ತುಂಬೆ ಸಮೂಹ ಸಂಸ್ಥೆಯಿಂದ BCF ಅಧ್ಯಕ್ಷ ಡಾ.ಬಿ.ಕೆ.ಯೂಸುಫ್​ಗೆ ʼLIFE TIME ACHIEVEMENT AWARDʼ

ಅಜ್ಮಾನ್: ತುಂಬೆ ಸಂಸ್ಥೆಯ 28ನೇ ವಾರ್ಷಿಕ ಅನಿವಾಸಿ ಕನ್ನಡಿಗರ ಸ್ನೇಹ ಸಮ್ಮಿಳನ...

ದುಬೈ; ‘ಬದ್ರಿಯಾ ಪ್ರೀಮಿಯರ್ ಲೀಗ್(BPL)-ಸೀಸನ್ 8’; ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಅಲ್ ದನಾ XI ತಂಡ; ರಾಯಲ್ ಥಂಡರ್ ಕುಡ್ಲ ರನ್ನರ್ ಅಪ್

ದುಬೈ: ಅನಿವಾಸಿ ಕನ್ನಡಿಗರ ಸಾಮಾಜಿಕ ಸಂಘಟನೆಯಾದ ‘ಬದ್ರಿಯಾ ಫ್ರೆಂಡ್ಸ್ ಯುಎಇ’ ಆಶ್ರಯದಲ್ಲಿ...

ಶೀಘ್ರವೇ ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಳಗಾವಿ: ಅನಿವಾಸಿ ಕನ್ನಡಿಗರ ಬಹುಕಾಲದ ಅತ್ಯಂತ ಪ್ರಮುಖ ಬೇಡಿಕೆಯಾಗಿರುವ ಪ್ರತ್ಯೇಕ ಸಚಿವಾಲಯವನ್ನು...

ಡಿ.12ರಂದು ಬಹರೈನ್ ಕನ್ನಡ ಸಂಘದಿಂದ ‘ಕನ್ನಡ ವೈಭವ’ ಸಾಂಸ್ಕೃತಿಕ ಕಾರ್ಯಕ್ರಮ; ಮುತ್ತುಗಳ ದ್ವೀಪದಲ್ಲಿ ಹಾಡು, ಹಾಸ್ಯ, ನೃತ್ಯಗಳ ಮಹಾ ಸಂಗಮ

ಬಹರೈನ್: ಇಲ್ಲಿನ ರಾಜ್ಯಪ್ರಶಸ್ತಿ ಪುರಸ್ಕೃತ ಕನ್ನಡ ಸಂಘದ ವಾರ್ಷಿಕ ಕಾರ್ಯಕ್ರಮವಾದ "ಕನ್ನಡ...

Related Articles

Popular Categories