Lead Newsಗಾಝಾ ಮಕ್ಕಳ ನರಮೇಧವನ್ನು ಕಟುವಾಗಿ ಖಂಡಿಸಿದ ಪೋಪ್‌ ಫ್ರಾನ್ಸಿಸ್‌

ಗಾಝಾ ಮಕ್ಕಳ ನರಮೇಧವನ್ನು ಕಟುವಾಗಿ ಖಂಡಿಸಿದ ಪೋಪ್‌ ಫ್ರಾನ್ಸಿಸ್‌

ವ್ಯಾಟಿಕನ್‌ ಸಿಟಿ: ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಿಂದಾಗಿ ಒಂದೇ ಕುಟುಂಬದ ಏಳು ಮಕ್ಕಳು ಮರಣ ಹೊಂದಿದ್ದಾರೆ ಎಂದು ಗಾಝಾದ ರಕ್ಷಣಾ ಸಂಸ್ಥೆಯೊಂದು ಹೇಳಿಕೆ ನೀಡಿದ ಒಂದು ದಿನದ ಬಳಿಕ ಈ ದಾಳಿಯನ್ನು ಕ್ರೈಸ್ತರ ಪರಮೋಚ್ಛ ನಾಯಕ ಪೋಪ್‌ ಫ್ರಾನ್ಸಿಸ್‌ ಕಟುವಾಗಿ ಖಂಡಿಸಿದ್ದಾರೆ. ಇದೊಂದು ಕ್ರೌರ್ಯವಾಗಿದೆ ಎಂದು ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಸ್ರೇಲಿ ವೈಮಾನಿಕ ದಾಳಿಯು ಶುಕ್ರವಾರ ಗಾಝಾದ ಉತ್ತರ ಭಾಗದಲ್ಲಿ ಏಳು ಮಕ್ಕಳು ಸೇರಿದಂತೆ ಒಂದು ಕುಟುಂಬದ 10 ಸದಸ್ಯರನ್ನು ಕೊಂದಿದೆ ಎಂದು ಗಾಝಾ ನಾಗರಿಕ ರಕ್ಷಣಾ ಸಂಸ್ಥೆಯು ವರದಿಯಲ್ಲಿ ತಿಳಿಸಿದೆ.

“ನಿನ್ನೆ ಅವರು ಈ ಹಿಂದೆ ವಾಗ್ದಾನ ಮಾಡಿದಂತೆ ಜನರನ್ನು ಗಾಝಾಕ್ಕೆ ಅನುಮತಿಸಲಿಲ್ಲ ಮಾತ್ರವಲ್ಲದೇ ಅವರು ಮಕ್ಕಳ ಮೇಲೆ ಬಾಂಬ್‌ ದಾಳಿ ನಡೆಸಿದ್ದಾರೆ. ಇದು ಯುದ್ಧವಲ್ಲ ಕ್ರೌರ್ಯ” ಎಂದು ಹೇಳಿದ ಪೋಪ್‌ ಫ್ರಾನ್ಸಿಸ್‌, “ಇದು ನನ್ನ ಹೃದಯವನ್ನು ಚುಚ್ಚುತ್ತದೆ, ಆದ್ದರಿಂದ ಈ ಮಾತನ್ನು ನಾನು ಹೇಳುತ್ತಿದ್ದೇನೆ” ಎಂದೂ ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.

ಇಸ್ರೇಲ್‌ ಸೈನ್ಯ ಮತ್ತು ಫ್ಯಾಲೆಸ್ತೀನ್‌ ನ ಹಮಾಸ್‌ ನಡುವೆ ಕದನ ವಿರಾಮ ತರುವ ಕುರಿತಾದಂತೆ ಹಲವು ಅಂತಾರಾಷ್ಟ್ರೀಯ ಮಧ್ಯವರ್ತಿಗಳು ಮಾತುಕತೆಗಳನ್ನು ನಡೆಸುತ್ತಿರುವ ಮಧ್ಯೆಯೇ ಈ ಬಾಂಬ್‌ ದಾಳಿ ನಡೆದಿದೆ.

Hot this week

ನಾಳೆ ಒಮಾನಿನಲ್ಲಿ ‘ಮಸ್ಕತ್ ಗಡಿನಾಡ ಉತ್ಸವ-2025’ ಸಾಂಸ್ಕೃತಿಕ ಕಾರ್ಯಕ್ರಮ; ಆಮಂತ್ರಣ ಪತ್ರಿಕೆ ಅನಾವರಣ

ಮಸ್ಕತ್: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು, ಒಮಾನ್ ಘಟಕ ಮಸ್ಕತ್...

ತವರು ಪ್ರೇಮ ಮೆರೆದ ಹುಬ್ಬಳ್ಳಿ ಮೂಲದ ಕನ್ನಡಿಗ; ಲಂಡನಿನಲ್ಲಿ ತನ್ನ ಹೊಸ ‘ಟೆಸ್ಲಾ’ ಕಾರಿಗೆ ಧಾರವಾಡ ರಿಜಿಸ್ಟ್ರೇಷನ್ ಸಂಖ್ಯೆ!

ಲಂಡನ್: ವಿದೇಶದಲ್ಲಿದ್ದುಕೊಂಡು ತಮ್ಮ ತವರು ನಗರದೊಂದಿಗಿನ ಭಾವನಾತ್ಮಕ ಸಂಪರ್ಕವನ್ನು ಜೀವಂತವಾಗಿಡಲು ಇಲ್ಲೊಬ್ಬ...

Veteran expat Abdulaziz Kushalnagar passes away in Riyadh

Riyadh: Abdulaziz Kushalnagar, a long-time Indian expatriate from Kushalnagar...

Related Articles

Popular Categories