ಬಹರೈನ್ಮೀನುಗಾರಿಕೆ ವೇಳೆ ಬಹರೈನ್‌ನಲ್ಲಿ ಬಂಧಿಸಲ್ಪಟ್ಟಿದ್ದ ತಮಿಳುನಾಡಿನ 28 ಮೀನುಗಾರರು...

ಮೀನುಗಾರಿಕೆ ವೇಳೆ ಬಹರೈನ್‌ನಲ್ಲಿ ಬಂಧಿಸಲ್ಪಟ್ಟಿದ್ದ ತಮಿಳುನಾಡಿನ 28 ಮೀನುಗಾರರು ಭಾರತಕ್ಕೆ ವಾಪಸ್

 ಮನಾಮಾ/ ಬಹರೈನ್: ಮೀನುಗಾರಿಕೆ ವೇಳೆ ಬಹರೈನ್ ಸರಕಾರದಿಂದ ಬಂಧಿಸಲ್ಪಟ್ಟ ತಮಿಳುನಾಡು ಮೂಲದ 28 ಭಾರತೀಯ ಮೀನುಗಾರರನ್ನು  ವಾಪಸ್ ಭಾರತಕ್ಕೆ ಕಳುಹಿಸುವುದಾಗಿ ಬಹರೈನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಇರಾನ್‌ನಲ್ಲಿ ಮೀನುಗಾರಿಕೆ ವೇಳೆ ಅಚಾತುರ್ಯದಿಂದ ಗಡಿದಾಟಿದ್ದ ತಮಿಳುನಾಡಿನ ತಮಿಳುನಾಡಿನ ತಿರುನಲ್‌ವೇಲಿ ಜಿಲ್ಲೆಯ ಇಡಿಂತಕರೈ ಗ್ರಾಮದ 28 ಮೀನುಗಾರರನ್ನು ಸೆ.11ರಂದು ಬಹರೈನ್‌ನ ಕೋಸ್ಟ್‌ಗಾರ್ಡ್ ಪೊಲೀಸರು ಬಂಧಿಸಿದ್ದರು.

ಬಂಧಿಸಲ್ಪಟ್ಟಿದ್ದ 28 ಮೀನಗಾರರಿಗೆ 6 ತಿಂಗಳ ಶಿಕ್ಷೆಯನ್ನು ವಿಧಿಸಲಾಗಿತ್ತಾದರೂ ಬಳಿಕ ಅದನ್ನು 3 ತಿಂಗಳಿಗೆ ಕಡಿತಗೊಳಿಸಲಾಗಿತ್ತು ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಈ ಕುರಿತಾಗಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಭಾರತೀಯ ರಾಯಭಾರ ಕಚೇರಿ, ‘ಮೀನುಗಾರಿಕೆ ವೇಳೆ ಬಂಧಿಸಲ್ಪಟ್ಟು ಇತ್ತೀಚೆಗೆ ಬಿಡುಗಡೆಗೊಂಡ 28  ಭಾರತೀಯ ಮೀನುಗಾರರನ್ನು ಭಾರತಕ್ಕೆ ವಾಪಸ್ ಕಳುಹಿಸಲಾಗುತ್ತಿದೆ. ಅವರಿಗೆ ಭಾರತೀಯ ರಾಯಭಾರ ಕಚೇರಿಯು ಕಾನೂನಿತ್ಮಕ ಸಹಕಾರ ನೀಡಿದ್ದು, ಪ್ರಯಾಣವೆಚ್ಚವನ್ನು ಭಾರತ ಸರಕಾರದ ಇಂಡಿಯನ್ ಕಮ್ಯೂನಿಟಿ ವೆಲ್‌ಫೇರ್ ಫಂಡ್‌ನಿಂದ ಭರಿಸಲಾಗಿದೆ. ಭಾರತೀಯರ ಕ್ಷೇಮವೇ ನಮ್ಮ ಆದ್ಯತೆ’ ಎಂದು ಬರೆದುಕೊಂಡಿದೆ.

ಬಹರೈನ್‌ನ ಸಂಬಂಧಪಟ್ಟ ಅಧಿಕಾರಿಗಳ ಶೀಘ್ರ ಸ್ಪಂದನೆಗೆ  ಧನ್ಯವಾದ ತಿಳಿಸಿರುವ ಭಾರತೀಯ ರಾಯಭಾರ ಕಚೇರಿಯು, ‘ಮೀನುಗಾರರು ಆದಷ್ಟು ಶೀಘ್ರದಲ್ಲೇ ಸುರಕ್ಷಿತವಾಗಿ ತಮ್ಮ ಕುಟುಂಬವನ್ನು ಸೇರಿಕೊಳ್ಳಲಿ’ ಎಂದು ಎಕ್ಸ್‌ನಲ್ಲಿ ಹಾರೈಸಿದೆ.

ಈ ಕುರಿತಾಗಿ ಸೆ.26ರಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ವಿದೇಶಾಂಗ ಸಚಿವ ಜೈಶಂಕರ್‌ಗೆ ಪತ್ರ ಬರೆದಿದ್ದು, ಕೂಡಲೇ ಬಂಧಿತ ಮೀನುಗಾರರ ಬಿಡುಗಡೆಗೆ ರಾಜತಾಂತ್ರಿಕ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.

‘ತಿರುನಲ್‌ವೇಲಿ ಜಿಲ್ಲೆಯ ಇಡಿಂತಕರೈ ಗ್ರಾಮದ 28 ಮೀನುಗಾರರು ಇರಾನ್ ಸಮುದ್ರ ಪ್ರದೇಶದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಸೆ.11ರಂದು ಬಹರೈನ್ ಕೋಸ್ಟ್‌ಗಾರ್ಡ್ ಪೊಲೀಸರಿಂದ ಬಂಧಿಸಲ್ಪಟ್ಟಿರುವ ವಿಚಾರ ನನ್ನ ಗಮನಕ್ಕೆ ಬಂದಿದೆ. ಅವರು ಅಚಾತುರ್ಯದಿಂದ ಗಡಿದಾಟಿದ್ದರು. ಅಲ್ಲದೇ ಅವರು ಮೀನುಗಾರಿಕೆ ನಡೆಸುತ್ತಿದ್ದ ಬೋಟ್ ಇರಾನ್ ಪ್ರಜೆಗೆ ಸೇರಿದ್ದಾಗಿದೆ. ಬಂಧಿಸ್ಪಟ್ಟ ಮೀನುಗಾರರ ಕುಟುಂಬಸ್ಥರು ಇವರನ್ನೇ ಆಶ್ರಯಿಸಿಕೊಂಡಿದ್ದು, ಅವರ ಬಂಧನದಿಂದ ಆ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ’ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದರು.

Hot this week

ಬಹರೈನ್; ಆಗಸ್ಟ್ 21ರಂದು ‘ಕೆಸಿಎಫ್’ನಿಂದ ಗ್ರ್ಯಾಂಡ್ ಮೀಲಾದ್ ಕಾನ್ಫರೆನ್ಸ್

ಮನಾಮ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ...

ಭಾರತೀಯ ರಾಯಭಾರ ಕಚೇರಿಯ ಡಾ.ಈಶ್ ಸಿಂಘಾಲ್​​ಗೆ ಭಾವಪೂರ್ಣ ಬೀಳ್ಕೊಡುಗೆ; ಕರ್ನಾಟಕ ಸಂಘ ಖತರ್‌ನಿಂದ ಅಭಿನಂದನೆ

ದೋಹಾ(ಖತರ್): ಖತರ್‌ನಲ್ಲಿ ತಮ್ಮ ಸೇವಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಭಾರತೀಯ ರಾಯಭಾರ ಕಚೇರಿಯ...

ವಂದೇ ಮಾತರಂ ಮತ್ತು ಜನಗಣಮನ ಗೀತೆಯೊಂದಿಗೆ ಅಮೇರಿಕದಲ್ಲಿ ಗೃಹಪ್ರವೇಶ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ 1875ರಲ್ಲಿ ಭಾರತದಲ್ಲಿ ಮೊಳಗಿದ ‘ವಂದೇ ಮಾತರಂ’ 150...

ದುಬೈ; ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಸಾಮಾಜಿಕ ಸಮ್ಮಿಲನ ಕಾರ್ಯಕ್ರಮ

ದುಬೈ: ಪರಿಸರ ಸಂರಕ್ಷಣೆ, ಸಾಮಾಜಿಕ ಜಾಗೃತಿ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಬದ್ಧವಾಗಿರುವ...

ನ್ಯೂಯಾರ್ಕ್; ಆಲ್ಬನಿಯಲ್ಲಿ ಸಂಭ್ರಮದ ಕನ್ನಡ ಕಲಿ ಪದವಿ ಪ್ರದಾನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಆಲ್ಬನಿ(ನ್ಯೂಯಾರ್ಕ್): ಅಮೇರಿಕದಲ್ಲಿ ಹುಟ್ಟಿ ಬೆಳೆಯುತ್ತಿರುವ ಮಕ್ಕಳಿಗೆ ಕನ್ನಡ...

Related Articles

Popular Categories