ಸೌದಿ ಅರೇಬಿಯಾಸೌದಿ: ಅಲ್ ಖಮರ್ ವೆಲ್ಫೇರ್ ಅಸೋಸಿಯೇಷನ್‌ನಿಂದ ಇಫ್ತಾರ್ ಕೂಟ

ಸೌದಿ: ಅಲ್ ಖಮರ್ ವೆಲ್ಫೇರ್ ಅಸೋಸಿಯೇಷನ್‌ನಿಂದ ಇಫ್ತಾರ್ ಕೂಟ

ಸೌದಿ ಅರೇಬಿಯಾ: ರಮಝಾನ್ ಪವಿತ್ರ ತಿಂಗಳ ಅಂಗವಾಗಿ ಅಲ್ ಖಮರ್ ವೆಲ್ಫೇರ್ ಅಸೋಸಿಯೇಷನ್(AQWA) ಜುಬೈಲ್‌ನ ಹಿಲ್ಟನ್ ನಲ್ಲಿ ಗುರುವಾರ(ಮಾರ್ಚ್ 5) ಇಫ್ತಾರ್ ಕೂಟವನ್ನು ಆಯೋಜಿಸಿತ್ತು.

ಈ ಸಂದರ್ಭದಲ್ಲಿ ಅಲ್ ಖಮರ್ ವೆಲ್ಫೇರ್ ಅಸೋಸಿಯೇಷನ್(AQWA) ಅಧ್ಯಕ್ಷರಾದ ಅಕ್ಬರ್ ಮಾತನಾಡಿ, ರಮಝಾನ್ ತಿಂಗಳು ಸಹಾನುಭೂತಿ, ದಾನ,ಧರ್ಮ ಮತ್ತು ಸಮುದಾಯದ ಒಗ್ಗಟ್ಟನ್ನು ಬೆಳೆಸುವ ಸಮಯವಾಗಿದೆ. ಇದು ಕೇವಲ ಊಟದ ಕಾರ್ಯಕ್ರಮವಲ್ಲದೆ, ನಮ್ಮ ಮಧ್ಯೆ ಒಡನಾಟ ಮತ್ತು ಪರಸ್ಪರ ಸಹಕಾರವನ್ನು ಹೆಚ್ಚಿಸುವ ಸಂದರ್ಭವಾಗಿದೆ ಎಂದರು.

ಅಲ್ ಖಮರ್ ವೆಲ್ಫೇರ್ ಅಸೋಸಿಯೇಷನ್‌ನ ಈ ಇಫ್ತಾರ್ ಕೂಟವು ಸಮುದಾಯದಲ್ಲಿ ಸೌಹಾರ್ದತೆಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಜೊತೆಗೆ ರಮಝಾನ್‌ನ ಆಧ್ಯಾತ್ಮಿಕ ಮೌಲ್ಯಗಳನ್ನು ಎತ್ತಿ ತೋರಿಸುವ ಮತ್ತು ಸಮುದಾಯದ ಒಗ್ಗಟ್ಟನ್ನು ಬಲಪಡಿಸುವ ಉತ್ತಮ ಉದಾಹರಣೆಯಾಗಿದೆ ಎಂದು ಭಾಗವಹಿಸಿದವರು ಅಭಿಪ್ರಾಯಪಟ್ಟರು.

ಈ ಇಫ್ತಾರ್ ಕೂಟ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು, ಸಮುದಾಯದ ಪ್ರಮುಖರು ಹಾಗೂ ಅನೇಕ ಅತಿಥಿಗಳು ಭಾಗವಹಿಸಿದ್ದರು. ರುಚಿಕರವಾದ ಫಲಹಾರಗಳು ಮತ್ತು ವಿಶೇಷ ಭೋಜನದೊಂದಿಗೆ ಸಮಾರಂಭವು ಸಂತೋಷಕರವಾಗಿ ನಡೆಯಿತು.

Hot this week

ಕನ್ನಡ ಸಂಘ ಬಹರೈನ್ ವತಿಯಿಂದ ಯಶಸ್ವಿಯಾಗಿ ಮೂಡಿಬಂದ ‘KSB ಐಕ್ಯತಾ ಪಾದಯಾತ್ರೆ ಹಾಗೂ ನಿಷ್ಠಾ ಪ್ರತಿಜ್ಞೆ ಸಹಿ’ ಕಾರ್ಯಕ್ರಮ

ಮನಾಮ(ಬಹರೈನ್): ಕನ್ನಡ ಸಂಘ ಬಹರೈನ್ ವತಿಯಿಂದ ವಾಟರ್ ಗಾರ್ಡನ್, ಗುಫೂಲ್ ನಲ್ಲಿ...

ಖತರ್‌ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷೆ ಅನುಷ್ಠಾನಕ್ಕೆ ಭಾರತೀಯ ರಾಯಭಾರ ಕಚೇರಿಯ ಸಂಪೂರ್ಣ ಆಡಳಿತಾತ್ಮಕ ಬೆಂಬಲ: ಹರೀಶ್ ಪಾಂಡೆ

ದೋಹಾ: ಖತರ್‌ನಲ್ಲಿರುವ ಕನ್ನಡ ಮಾತನಾಡುವ ಅನಿವಾಸಿ ಭಾರತೀಯರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ...

ದುಬೈ; ನವೆಂಬರ್ 1ರಂದು 71ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾದ ಕರ್ನಾಟಕ ಸಂಘ ದುಬೈ

ದುಬೈ: ಯುಎಇಯಲ್ಲಿರುವ ಕನ್ನಡಿಗರ ಅತಿದೊಡ್ಡ ಮತ್ತು ಅತ್ಯಂತ ಹಳೆಯ ಸಂಘಟನೆಯಾದ ಕರ್ನಾಟಕ...

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

ಬಹರೈನ್‌; ‘ಕೆಸಿಎಫ್’ನಿಂದ ಈದ್ ಮಿಲಾದ್ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ

ಮನಾಮ: ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್) ಬಹರೈನ್‌ ವತಿಯಿಂದ ಪ್ರವಾದಿ ಮುಹಮ್ಮದ್‌ರವರ...

Related Articles

Popular Categories