ಖತರ್ಖತರ್‌ನಲ್ಲಿ 'ಸಿಗ್ದಾ-ಸಮುದಾಯ ಸಮರ್ಥ ಸೇವಕ ಪ್ರಶಸ್ತಿ' ಪಡೆದ ಕನ್ನಡಿಗ...

ಖತರ್‌ನಲ್ಲಿ ‘ಸಿಗ್ದಾ-ಸಮುದಾಯ ಸಮರ್ಥ ಸೇವಕ ಪ್ರಶಸ್ತಿ’ ಪಡೆದ ಕನ್ನಡಿಗ ಸುಬ್ರಹ್ಮಣ್ಯ ಹೆಬ್ಬಾಗಿಲು

ಇತ್ತೀಚಿಗೆ ಖತರ್‌ನ ದೋಹಾದಲ್ಲಿ ನಡೆದ ‘ದಕ್ಷಿಣ ಭಾರತ ಪ್ರತಿಭಾನ್ವೇಷಣೆಯ ಪ್ರಶಸ್ತಿ(SIGTA)’ ಪ್ರಧಾನ ಸಮಾರಂಭದಲ್ಲಿ ಕರ್ನಾಟಕದ ಬೈಂದೂರು ಮೂಲದವರಾದ ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರಿಗೆ ‘ಸಮುದಾಯ ಸಮರ್ಥ ಸೇವಕ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಖತರ್‌ನ ಕಾರ್ಮಿಕ ಸಚಿವ ಸಲೀಮ್ ದರ್ವಿಶ್ ಅಲ್ ಮಹನ್, ಕನ್ನಡ ಚಿತ್ರ ನಿರ್ಮಾಪಕ, ನಟ ರಾಕ್ ಲೈನ್ ವೆಂಕಟೇಶ್ ಹಾಗು ಸಂಘಟಕರು ಪ್ರಶಸ್ತಿ ವಿತರಿಸಿದರು.

ಈ ಪ್ರಶಸ್ತಿಯು ಸುಬ್ರಹ್ಮಣ್ಯ ಹೆಬ್ಬಾಗಿಲು ಅವರ ಅಪ್ರತಿಮ ಕೊಡುಗೆ ಹಾಗೂ ಅಚಲ ಸೇವೆಯನ್ನು ಗುರುತಿಸಿ ನೀಡಲಾಗಿದೆ. ಖತರ್‌ನಲ್ಲಿ ಕಳೆದ 15 ವರ್ಷಗಳಿಗಿಂತ ಹೆಚ್ಚು ಕಾಲ ಕೆಲಸ-ಕಾರ್ಯ ಮಾಡಿಕೊಂಡಿರುವ ಸುಬ್ರಹ್ಮಣ್ಯ ಅವರು, ಹಲವಾರು ಸಾಮಾಜಿಕ, ಸಾಂಸ್ಕೃತಿಕ ಹಾಗು ಕ್ರೀಡಾ ಕಾರ್ಯಕ್ರಮಗಳಲ್ಲಿ ತೊಡಗಿಸಿ ಕೊಂಡು ಭಾರತೀಯ ಸಮುದಾಯದ ಅಭಿವೃದ್ಧಿ ಹಾಗೂ ಏಳಿಗೆಗೆ ಶ್ರಮಿಸುತ್ತಿದ್ದಾರೆ.

Hot this week

ಬಹರೈನ್: ಯಕ್ಷಗುರು ದೀಪಕ್ ರಾವ್ ಪೇಜಾವರರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಬಹರೈನ್: ಕಳೆದ ಒಂದು ದಶಕದಿಂದ ಬಹರೈನ್ ದ್ವೀಪರಾಷ್ಟ್ರದಲ್ಲಿ ನೆಲೆಸಿರುವ ಖ್ಯಾತ ಯಕ್ಷಗಾನ...

ನ್ಯೂಯಾರ್ಕ್ ಮೇಯರ್ ಆಗಿ ಭಾರತೀಯ ಮೂಲದ ಝೊಹ್ರಾನ್ ಮಮ್ದಾನಿ ಆಯ್ಕೆ ಸಂಭವ; ಗೆದ್ದರೆ, ಹಲವು ಇತಿಹಾಸ ಸೃಷ್ಟಿ!

ಜೂನ್ 24 ರಂದು ನಡೆದ ನ್ಯೂಯಾರ್ಕ್ ಮೇಯರ್ ಹುದ್ದೆಗೆ ಪಕ್ಷಗಳ ಅಭ್ಯರ್ಥಿಯ...

ಗಲ್ಫ್‌ನಲ್ಲಿ ಮತ್ತೆ ಕವಿದ ಯುದ್ಧದ ಕಾರ್ಮೋಡ; ವಲಸಿಗರನ್ನು ಕಾಡುತ್ತಿವೆ 1991ರ ಕೊಲ್ಲಿ ಯುದ್ಧದ ಕಹಿ ನೆನಪುಗಳು…!

ಇರಾನ್-ಇಸ್ರೇಲ್ ದಾಳಿಯಲ್ಲಿ ಅಮೇರಿಕ ನೇರವಾಗಿ ಭಾಗವಹಿಸುತ್ತಿರುವುದರಿಂದ , ಅಮೇರಿಕದ ಮಿತ್ರ ರಾಷ್ಟ್ರಗಳಾದ...

ಜೂನ್ 29ರಂದು ಯುಎಇ ಯಕ್ಷಗಾನ ಅಭ್ಯಾಸ ಕೇಂದ್ರದ ದಶಮಾನೋತ್ಸವ: 7 ಮಂದಿ ಸಾಧಕರಿಗೆ-ಮೂರು ಸಾಧಕ ಸಂಸ್ಥೆಗಳಿಗೆ ಸನ್ಮಾನ

ದುಬೈ:ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಕಾರ್ಯಕ್ರಮವು ಜೂನ್ 29ರಂದು...

Related Articles

Popular Categories