ಖತರ್ಖತರ್‌ನಲ್ಲಿ 'ಸಿಗ್ದಾ-ಸಮುದಾಯ ಸಮರ್ಥ ಸೇವಕ ಪ್ರಶಸ್ತಿ' ಪಡೆದ ಕನ್ನಡಿಗ...

ಖತರ್‌ನಲ್ಲಿ ‘ಸಿಗ್ದಾ-ಸಮುದಾಯ ಸಮರ್ಥ ಸೇವಕ ಪ್ರಶಸ್ತಿ’ ಪಡೆದ ಕನ್ನಡಿಗ ಸುಬ್ರಹ್ಮಣ್ಯ ಹೆಬ್ಬಾಗಿಲು

ಇತ್ತೀಚಿಗೆ ಖತರ್‌ನ ದೋಹಾದಲ್ಲಿ ನಡೆದ ‘ದಕ್ಷಿಣ ಭಾರತ ಪ್ರತಿಭಾನ್ವೇಷಣೆಯ ಪ್ರಶಸ್ತಿ(SIGTA)’ ಪ್ರಧಾನ ಸಮಾರಂಭದಲ್ಲಿ ಕರ್ನಾಟಕದ ಬೈಂದೂರು ಮೂಲದವರಾದ ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರಿಗೆ ‘ಸಮುದಾಯ ಸಮರ್ಥ ಸೇವಕ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಖತರ್‌ನ ಕಾರ್ಮಿಕ ಸಚಿವ ಸಲೀಮ್ ದರ್ವಿಶ್ ಅಲ್ ಮಹನ್, ಕನ್ನಡ ಚಿತ್ರ ನಿರ್ಮಾಪಕ, ನಟ ರಾಕ್ ಲೈನ್ ವೆಂಕಟೇಶ್ ಹಾಗು ಸಂಘಟಕರು ಪ್ರಶಸ್ತಿ ವಿತರಿಸಿದರು.

ಈ ಪ್ರಶಸ್ತಿಯು ಸುಬ್ರಹ್ಮಣ್ಯ ಹೆಬ್ಬಾಗಿಲು ಅವರ ಅಪ್ರತಿಮ ಕೊಡುಗೆ ಹಾಗೂ ಅಚಲ ಸೇವೆಯನ್ನು ಗುರುತಿಸಿ ನೀಡಲಾಗಿದೆ. ಖತರ್‌ನಲ್ಲಿ ಕಳೆದ 15 ವರ್ಷಗಳಿಗಿಂತ ಹೆಚ್ಚು ಕಾಲ ಕೆಲಸ-ಕಾರ್ಯ ಮಾಡಿಕೊಂಡಿರುವ ಸುಬ್ರಹ್ಮಣ್ಯ ಅವರು, ಹಲವಾರು ಸಾಮಾಜಿಕ, ಸಾಂಸ್ಕೃತಿಕ ಹಾಗು ಕ್ರೀಡಾ ಕಾರ್ಯಕ್ರಮಗಳಲ್ಲಿ ತೊಡಗಿಸಿ ಕೊಂಡು ಭಾರತೀಯ ಸಮುದಾಯದ ಅಭಿವೃದ್ಧಿ ಹಾಗೂ ಏಳಿಗೆಗೆ ಶ್ರಮಿಸುತ್ತಿದ್ದಾರೆ.

Hot this week

ಕನ್ನಡ ಸಂಘ ಬಹರೈನ್ ನ ಸಂಭ್ರಮದ 48ನೇ ವಾರ್ಷಿಕೋತ್ಸವ ಆಚರಣೆ

ಬಹರೈನ್: ಕನ್ನಡ ಸಂಘ ಬಹರೈನ್ ನ 48ನೇ ವಾರ್ಷಿಕೋತ್ಸವವನ್ನು ಕನ್ನಡ ಭವನದ...

ತುಳುನಾಡಿನ ಆಚರಣೆಗಳಲ್ಲಿ ಮೂಡನಂಬಿಕೆ ವೈಭವೀಕರಣಕ್ಕೆ ಕಳವಳ ವ್ಯಕ್ತಪಡಿಸಿದ ಡಾ.ಸಂತೋಷ್ ಗುರೂಜಿ

ದುಬೈ: ಅರಬ್ ಸಂಯುಕ್ತ ಸಂಸ್ಥಾನದ ವಾಣಿಜ್ಯ ನಗರಿ ದುಬೈಯಲ್ಲಿ ಯುಎಇ ಬಂಟ್ಸ್...

ಹಾಂಗ್ ಕಾಂಗ್‌ನಲ್ಲಿ ಕನ್ನಡ ಶಾಲೆ ಆರಂಭಿಸಲು ಕರ್ನಾಟಕ ಸರಕಾರ ನೆರವು ಅಗತ್ಯ: ‘ಕನ್ನಡ ಸಂಘ ಹಾಂಗ್ ಕಾಂಗ್’ ಅಧ್ಯಕ್ಷೆ ವಾಣಿ ರಮೇಶ್ ಬಾಬು

ವಿಶೇಷ ಸಂದರ್ಶನ: ಎಂ.ಇಕ್ಬಾಲ್ ಉಚ್ಚಿಲ, ದುಬೈ ಜಗತ್ತಿನ ಅತೀ ಹೆಚ್ಚು ಶ್ರೀಮಂತರನ್ನು ಹೊಂದಿರುವ...

ದುಬೈ; ಫೆಬ್ರವರಿ 28ರಂದು ‘ಬ್ಯಾರೀಸ್ ಕಲ್ಚರಲ್ ಫೋರಮ್( BCF)’ನಿಂದ ‘ಇಫ್ತಾರ್ ಮೀಟ್ 2026’

ದುಬೈ: ಕಳೆದ 28 ವರ್ಷಗಳಿಂದ ಸಾಮುದಾಯಿಕ ಸೇವಾ ಕಾರ್ಯದಲ್ಲಿ ತೊಡಗಿ ಕೊಂಡಿರುವ...

ಶಾರ್ಜಾ ರೋಲ್ಲಾದಲ್ಲಿ ‘ಮ್ಯಾಕ್ಸ್‌ಕೇರ್ ಕ್ಲಿನಿಕ್ಸ್’ನ ಹೊಸ ಶಾಖೆ ಆರಂಭ; ಕಡಿಮೆ ವೆಚ್ಚದ ಆರೋಗ್ಯ ಸೇವೆಗೆ ಹೆಚ್ಚಿನ ಪ್ರವೇಶ

ಶಾರ್ಜಾ: ಯುಎಇಯಲ್ಲಿ ವೇಗವಾಗಿ ಬೆಳೆಯುತ್ತಿರುವ ಪ್ರಾಥಮಿಕ ಆರೋಗ್ಯ ಸೇವಾ ಸಂಸ್ಥೆಗಳಲ್ಲೊಂದಾದ ಮ್ಯಾಕ್ಸ್‌ಕೇರ್...

Related Articles

Popular Categories