ಯುಎಇಜ.12ರಂದು ಯುಎಇ ಡಿ.ಕೆ.ಎಸ್.ಸಿ.ಯ ಸಿಲ್ವರ್ ಜುಬಿಲಿ ಸಮಾರೋಪ; ಕರಾವಳಿ...

ಜ.12ರಂದು ಯುಎಇ ಡಿ.ಕೆ.ಎಸ್.ಸಿ.ಯ ಸಿಲ್ವರ್ ಜುಬಿಲಿ ಸಮಾರೋಪ; ಕರಾವಳಿ ಗ್ರ್ಯಾಂಡ್ ಫ್ಯಾಮಿಲಿ ಮುಲಾಖತ್ ಕಾರ್ಯಕ್ರಮ; ಮುಖ್ಯ ಅತಿಥಿಯಾಗಿ ಯು.ಟಿ.ಖಾದರ್

ದುಬೈ: ಮಂಗಳೂರಿನ ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ರಿ) ಇದರ ಯುಎಇ ರಾಷ್ಟೀಯ ಸಮಿತಿಯ ಸಿಲ್ವರ್ ಜುಬಿಲಿ ಸಮಾರೋಪ ಸಮಾರಂಭ ಹಾಗು ಯುಎಇ ಡಿ.ಕೆ.ಎಸ್.ಸಿ.ಯ ಕರಾವಳಿ ಗ್ರ್ಯಾಂಡ್ ಫ್ಯಾಮಿಲಿ ಮುಲಾಖತ್ ಕಾರ್ಯಕ್ರಮವು ಜನವರಿ 12ರ ರವಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 7.30ರ ವರಿಗೆ ಅಜ್ಮಾನಿನ ವುಡ್ ಲೆಮ್ ಪಾರ್ಕ್ ಸ್ಕೂಲ್’ನಲ್ಲಿ ಧಾರ್ಮಿಕ ಚೌಕಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ವಿಶೇಷವಾಗಿ ಮಕ್ಕಳಿಗೆ ಇಸ್ಲಾಮಿಕ್ ಕ್ವಿಝ್, ಭಾಷಣ, ಹಾಡು, ಕಲರಿಂಗ್ ಸ್ಪರ್ಧೆಗಳು ಹಾಗು ಮಹಿಳೆಯರಿಗಾಗಿ ಮದರಂಗಿ ಸ್ಪರ್ಧೆ, ಅಡುಗೆ ಸ್ಪರ್ಧೆ (Dessert or Sweets), ಕ್ವಿಝ್ ಇನ್ನಿತರ ಸ್ಪರ್ಧೆಗಳು ಹಾಗು ಪುರುಷರಿಗಾಗಿ ಹಗ್ಗ ಜಗ್ಗಾಟ ಇನ್ನಿತರ ಸ್ಪರ್ಧೆಗಳು, ವಿಶೇಷವಾಗಿ ಆಕರ್ಷಕ ವಿವಿಧ ತಂಡಗಳ ಪಥ ಸಂಚಲನ ನಡೆಯಲಿದೆ.

ಕಾರ್ಯಕ್ರಮವು ಸಯ್ಯದ್ ತ್ವಾಹ ಬಾಫಖಿ ತಂಙಳ್ ಅವರ ದುಃವಾದೊಂದಿಗೆ ನಡೆಯಲಿದ್ದು, ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತರಾದ ಡಾ.ತುಂಬೆ ಮೊಯ್ದಿನ್, ಡಾ.ಬಿ.ಎಂ.ಉಮ್ಮರ್ ಹಾಜಿ, ಝಕಾರಿಯಾ ಜೋಕಟ್ಟೆ, ಅಕ್ರಮ್ ಶೇಖ್, ಎಡ್ವಕೇಟ್ ಖಲೀಲ್, ಇಬ್ರಾಹಿಂ ಗಡಿಯಾರ್, ಡಾ.ಬಿ.ಕೆ.ಯೂಸುಫ್, ಅಶ್ರಫ್ ಮಾಂತೂರ್, ಜಾಫರ್ ಬಿ.ಎಂ.ಇನ್ನಿತರ ಯುಎಇ ಉದ್ಯಮಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಡಿ.ಕೆ.ಎಸ್.ಸಿ ಸೆಂಟ್ರಲ್ ಕಮಿಟಿ ಮತ್ತು ವಿವಿಧ ರಾಷ್ಟ್ರೀಯ ನೇತಾರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Hot this week

ಅಬುಧಾಬಿ ಕರ್ನಾಟಕ ಸಂಘದಿಂದ ಅದ್ದೂರಿಯ ಕರ್ನಾಟಕ ರಾಜ್ಯೋತ್ಸವ; ಸವಿತಾ ನಾಯಕ್​ರಿಗೆ ‘ದ.ರಾ.ಬೇಂದ್ರೆ ಪ್ರಶಸ್ತಿ’ ಪ್ರದಾನ

ಅಬುಧಾಬಿ: ಅಬುಧಾಬಿ ಕರ್ನಾಟಕ ಸಂಘದ ಆಶ್ರಯದಲ್ಲಿ ಇತ್ತೀಚೆಗೆ ಅಬುಧಾಬಿಯ ಗ್ಲೋಬಲ್ ಇಂಡಿಯನ್...

Kuwait: KCWA’s annual family picnic draws over 600 attendees at Mishref Garden

Kuwait: The Kuwait Canara Welfare Association (KCWA) organised its...

ಖತರ್‌ನಲ್ಲಿ ಕರಾವಳಿ ಕನ್ನಡಿಗನ ಸಾಧನೆ; ಅಂಡರ್ 19 ಕ್ರಿಕೆಟ್ ತಂಡಕ್ಕೆ ಮಂಗಳೂರು ಮೂಲದ ಎಸ್ಸಾಮ್ ಮನ್ಸೂರ್ ಆಯ್ಕೆ

ದೋಹಾ: ಕರ್ನಾಟಕದ ಮಂಗಳೂರು ಮೂಲದ ಯುವಕ ಎಸ್ಸಾಮ್ ಮನ್ಸೂರ್, ಖತರ್ ಅಂಡರ್...

ರೊನಾಲ್ಡ್ ಮಾರ್ಟಿಸ್​ಗೆ ಶಾರ್ಜಾ ಕರ್ನಾಟಕ ಸಂಘದಿಂದ ‘ಮಯೂರ-ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

ದುಬೈ: ದುಬೈನಲ್ಲಿ ಇರುವ ಕನ್ನಡ ಪರ ಸಂಘಟನೆಗಳಲ್ಲಿ ಅರ್ಥಪೂರ್ಣ ಕಾರ್ಯಕ್ರಮ ಮಾಡುವುದರಲ್ಲಿ...

Related Articles

Popular Categories