ಯುಎಇದುಬೈಯಲ್ಲಿ ಸಂಭ್ರಮ, ಸಡಗರದ ಶ್ರೀರಾಮನವಮಿ ಆಚರಣೆ

ದುಬೈಯಲ್ಲಿ ಸಂಭ್ರಮ, ಸಡಗರದ ಶ್ರೀರಾಮನವಮಿ ಆಚರಣೆ

ದುಬೈ: ರಾಮನವಮಿ ಪ್ರಯುಕ್ತ ಶಂಕರ ಸೇವಾ ಸಮಿತಿಯವರು ದುಬೈಯ ಭಕ್ತಾಧಿಗಳನ್ನೆಲ್ಲ ಸೇರಿಸಿಕೊಂಡು ರವಿವಾರ ಇಲ್ಲಿನ ಅಲ್ ಐನ್ ರೋಡಿನ ಆಶಿಯಾನ ಫಾರ್ಮ್ ಹೌಸ್’ನಲ್ಲಿ ರಾಮನವಮಿಯನ್ನು ಸಂಭ್ರಮ, ಸಡಗರ ಹಾಗೂ ಶ್ರದ್ಧ ಭಕ್ತಿಯಿಂದ ಆಚರಿಸಿದರು.

ಈ ಕಾರ್ಯಕ್ರಮದಲ್ಲಿ ಪುರುಷರು, ಮಹಿಳೆಯರು, ಮಕ್ಕಳು ಹಾಗು ವಯೋವೃದ್ಧರು ಭಾಗವಹಿಸಿದ್ದರು. ಮಕ್ಕಳಿಗೆ ರಾಮಾಯಣ ವಿಷಯದ ಕುರಿತು ಚಿತ್ರಕಲಾ ಸ್ಪರ್ಧೆಯನ್ನು, ಜೊತೆಗೆ ಮಕ್ಕಳಿಗೆ ರಾಮನಾಮವನ್ನು 1008 ಬಾರಿ ಬರೆಯುವ ಅವಕಾಶವನ್ನು ಒದಗಿಸಲಾಗಿತ್ತು. ಇದೇ ವೇಳೆ ರಾಮಾಯಣಕ್ಕೆ ಸಂಬಂಧಿಸಿದಂತೆ ಮಕ್ಕಳು ರಾಮ, ಲಕ್ಶ್ಮಣ, ಸೀತೆಯ ವೇಷದಲ್ಲಿ ಬಂದು ದೇವರಿಗೆ ಅಭಿಷೇಕ ಮಾಡಿದರು. ರಾಮನ ಕುರಿತ ಹಾಡುಗಳ ಮೇಲೆ ದೀಪಾ ರಾಜೀವ್ ಅವರ ತಂಡದ ಮಕ್ಕಳು ನೃತ್ಯವನ್ನು ಮಾಡಿದರು.

ಬೆಳಗ್ಗೆ 9.30ರಿಂದ ಆರಂಭಗೊಂಡ ಕಾರ್ಯಕ್ರಮದಲ್ಲಿ ಅಭಿಷೇಕ, ಶ್ರೀರಾಮ ಅಷ್ಟೋತ್ತರ, ಶ್ರೀರಾಮ ತಾರಕ ಅಷ್ಟೋತ್ತರ, ಬಾಲ ರಾಮಾಯಣ, ಶ್ರೀ ರಾಮರಕ್ಷಾ ಸ್ತೋತ್ರ, ಅಷ್ಟಾವಧಾನ ಪೂಜಾ ಕೈಂಕರ್ಯಗಳು ನಡೆಯಿತು. ಇದರ ಜೊತೆ ಸುಮಾರು 30 ಮಂದಿ ಭಜನೆಯನ್ನು ನಡೆಸಿಕೊಟ್ಟರು. ಬಳಿಕ ಪುರೋಹಿತರಾದ ಲಕ್ಷ್ಮೀಶ ಅವರ ನೇತೃತ್ವದಲ್ಲಿ ಮಹಾಮಂಗಳಾರತಿ ಹಾಗು ಎಲ್ಲ ಪೂಜಾ ವಿಧಿ ವಿಧಾನಗಳು ಜರಗಿದವು. ಅನಂತರ ತೀರ್ಥ ಪ್ರಸಾದ ಹಾಗು ರಾಮನವಮಿಯ ವಿಶೇಷ ಭೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು.

ವರದಿ: ಆರತಿ ಅಡಿಗ

Hot this week

Kuwait: KCWA’s annual family picnic draws over 600 attendees at Mishref Garden

Kuwait: The Kuwait Canara Welfare Association (KCWA) organised its...

ಖತರ್‌ನಲ್ಲಿ ಕರಾವಳಿ ಕನ್ನಡಿಗನ ಸಾಧನೆ; ಅಂಡರ್ 19 ಕ್ರಿಕೆಟ್ ತಂಡಕ್ಕೆ ಮಂಗಳೂರು ಮೂಲದ ಎಸ್ಸಾಮ್ ಮನ್ಸೂರ್ ಆಯ್ಕೆ

ದೋಹಾ: ಕರ್ನಾಟಕದ ಮಂಗಳೂರು ಮೂಲದ ಯುವಕ ಎಸ್ಸಾಮ್ ಮನ್ಸೂರ್, ಖತರ್ ಅಂಡರ್...

ರೊನಾಲ್ಡ್ ಮಾರ್ಟಿಸ್​ಗೆ ಶಾರ್ಜಾ ಕರ್ನಾಟಕ ಸಂಘದಿಂದ ‘ಮಯೂರ-ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

ದುಬೈ: ದುಬೈನಲ್ಲಿ ಇರುವ ಕನ್ನಡ ಪರ ಸಂಘಟನೆಗಳಲ್ಲಿ ಅರ್ಥಪೂರ್ಣ ಕಾರ್ಯಕ್ರಮ ಮಾಡುವುದರಲ್ಲಿ...

ಖತರ್‌ನಲ್ಲಿ ಕರ್ನಾಟಕ ರಾಜ್ಯೋತ್ಸವ – ರಜತ ಸಂಭ್ರಮ ಸಮಾರೋಪ: ಗಲ್ಫ್ ನಾಡಿನಲ್ಲಿ ಗಂಧದ ನಾಡಿನ ವೈಭವ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ)ನ ಕರ್ನಾಟಕ ರಾಜ್ಯೋತ್ಸವ – ರಜತ...

ದುಬೈ: ಕನ್ನಡಿಗರ ಕೂಟದಿಂದ ʼಕನ್ನಡ ರಾಜ್ಯೋತ್ಸವ 2025ʼ ಭವ್ಯ ಸಂಭ್ರಮ

ದುಬೈ: ಕನ್ನಡಿಗರ ಕೂಟ – ದುಬೈ ಮತ್ತು ಗಲ್ಫ್ ಕನ್ನಡ ಮೂವೀಸ್...

Related Articles

Popular Categories