ಖತರ್ಖತರ್‌ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ...

ಖತರ್‌ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ಸ್ವೀಕಾರ

ದೋಹಾ(ಖತರ್):ಕರ್ನಾಟಕ ಸಂಘ ಖತರ್‌ನ 2026–2028 ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ಸ್ವೀಕರಿಸಿದ್ದು, ಖತರ್‌ನ ಕನ್ನಡ ಸಮುದಾಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.

ಅವರು ಈ ಜವಾಬ್ದಾರಿಯನ್ನು ಅತ್ಯಂತ ನಮ್ರತೆ ಮತ್ತು ಬದ್ಧತೆಯಿಂದ ಸ್ವೀಕರಿಸಿರುವುದಾಗಿ ತಿಳಿಸಿ, ಸಮುದಾಯಕ್ಕೆ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ಗೌರವದ ಸಂಗತಿಯಾಗಿದೆ ಎಂದು ಹೇಳಿದರು.

ನಿಕಟ ಪೂರ್ವ ಅಧ್ಯಕ್ಷರಾದ ರವಿ ಶೆಟ್ಟಿ ಹಾಗೂ ಆಡಳಿತ ಸಮಿತಿ (2024–2026) ಅವರ ಸೇವೆ ಮತ್ತು ಕೊಡುಗೆಗಳನ್ನು ಅವರು ಕೃತಜ್ಞತೆಯಿಂದ ಸ್ಮರಿಸಿದರು. ಅವರ ಶ್ರಮದಿಂದ ಸಂಘದ ಅಭಿವೃದ್ದಿಗೆ ಬಲವಾದ ಅಡಿಪಾಯ ನಿರ್ಮಾಣವಾಗಿದೆ ಎಂದು ಹೇಳಿದರು.

ಸಂಘದ ಎಲ್ಲಾ ಪೂರ್ವ ಅಧ್ಯಕ್ಷರಾದ ಸತೀಶ್ ದೇಶಪಾಂಡೆ, ನಾಗರಾಜ್, ಪ್ರಕಾಶ್ ಬಾಬು, ಕೆ. ಪ್ರಭಾಕರ್, ಅರವಿಂದ ಪಾಟೀಲ, ಅರುಣ್ ಕುಮಾರ್ ಕೆ.ಎಂ., ವಿ.ಎಸ್. ಮನ್ನಂಗಿ, ದೀಪಕ್ ಶೆಟ್ಟಿ, ಎಚ್.ಕೆ. ಮಧು, ವೆಂಕಟ್ ರಾವ್, ದಿವಂಗತ ಮೈರ್ಪಾಡಿ ನಾಗೇಶ್ ರಾವ್, ಸಂಜಯ ಕುದರಿ, ಮಹೇಶ್ ಗೌಡ ಹಾಗೂ ರವಿ ಶೆಟ್ಟಿ ಅವರ ಸೇವೆಯನ್ನು ಅವರು ಸ್ಮರಿಸಿ ಪ್ರಶಂಸಿಸಿದರು.

ಸಂಘದ ಎಲ್ಲಾ ಸಮಿತಿ ಸದಸ್ಯರು, ಸಮುದಾಯ ಮುಖಂಡರು ಮತ್ತು ಸದಸ್ಯರ ನಿರಂತರ ಸೇವೆ ಹಾಗೂ ಸಮರ್ಪಣೆಯನ್ನು ಅವರು ಶ್ಲಾಘಿಸಿದರು.

ಮುಂದಿನ ಅವಧಿಯಲ್ಲಿ ಕನ್ನಡ ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವುದು, ಸಂಸ್ಕೃತಿಯನ್ನು ಉತ್ತೇಜಿಸುವುದು ಮತ್ತು ಎಲ್ಲರಿಗೂ ಅರ್ಥಪೂರ್ಣ ಅವಕಾಶಗಳನ್ನು ಸೃಷ್ಟಿಸುವುದು ತಮ್ಮ ಗುರಿಯಾಗಿದೆ ಎಂದು ಅವರು ತಿಳಿಸಿದರು.

ಒಗ್ಗಟ್ಟಿನಿಂದ ಮತ್ತು ಉದ್ದೇಶಪೂರ್ವಕವಾಗಿ ನಾವು ಮುಂದೆ ಸಾಗಿದರೆ, ಇನ್ನಷ್ಟು ಮೈಲಿಗಲ್ಲುಗಳನ್ನು ಸಾಧಿಸಬಹುದು ಎಂದು ಸುಬ್ರಹ್ಮಣ್ಯ ಹೆಬ್ಬಾಗಿಲು ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕ ಸಂಘ ಖತರ್ ಭಾರತೀಯ ರಾಯಭಾರ ಕಚೇರಿಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಹಾಯಕ ಸಂಸ್ಥೆಯಾಗಿದ್ದು, ಖತರ್‌ನ ಕನ್ನಡಿಗರ ಪ್ರಮುಖ ವೇದಿಕೆಯಾಗಿದೆ.

Hot this week

ಯಕ್ಷಗಾನ ಕಲಾವಿದ ವಾಸು ಬಾಯರುಗೆ ‘ವಿಶೇಷ ಯಕ್ಷ ಶ್ರೀ ರಕ್ಷಾ ಗೌರವ ಪ್ರಶಸ್ತಿ’

ದುಬೈ : ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ (YAKU)ಯು ತವರೂರು ತಿರುಗಾಟದಲ್ಲಿ...

ಕನ್ನಡ ಸಂಘ ಬಹರೈನ್ ವತಿಯಿಂದ ಯಶಸ್ವಿಯಾಗಿ ಮೂಡಿಬಂದ ‘KSB ಐಕ್ಯತಾ ಪಾದಯಾತ್ರೆ ಹಾಗೂ ನಿಷ್ಠಾ ಪ್ರತಿಜ್ಞೆ ಸಹಿ’ ಕಾರ್ಯಕ್ರಮ

ಮನಾಮ(ಬಹರೈನ್): ಕನ್ನಡ ಸಂಘ ಬಹರೈನ್ ವತಿಯಿಂದ ವಾಟರ್ ಗಾರ್ಡನ್, ಗುಫೂಲ್ ನಲ್ಲಿ...

ಖತರ್‌ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷೆ ಅನುಷ್ಠಾನಕ್ಕೆ ಭಾರತೀಯ ರಾಯಭಾರ ಕಚೇರಿಯ ಸಂಪೂರ್ಣ ಆಡಳಿತಾತ್ಮಕ ಬೆಂಬಲ: ಹರೀಶ್ ಪಾಂಡೆ

ದೋಹಾ: ಖತರ್‌ನಲ್ಲಿರುವ ಕನ್ನಡ ಮಾತನಾಡುವ ಅನಿವಾಸಿ ಭಾರತೀಯರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ...

ದುಬೈ; ನವೆಂಬರ್ 1ರಂದು 71ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾದ ಕರ್ನಾಟಕ ಸಂಘ ದುಬೈ

ದುಬೈ: ಯುಎಇಯಲ್ಲಿರುವ ಕನ್ನಡಿಗರ ಅತಿದೊಡ್ಡ ಮತ್ತು ಅತ್ಯಂತ ಹಳೆಯ ಸಂಘಟನೆಯಾದ ಕರ್ನಾಟಕ...

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

Related Articles

Popular Categories