ಖತರ್ಖತರ್‌ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ...

ಖತರ್‌ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ಸ್ವೀಕಾರ

ದೋಹಾ(ಖತರ್):ಕರ್ನಾಟಕ ಸಂಘ ಖತರ್‌ನ 2026–2028 ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ಸ್ವೀಕರಿಸಿದ್ದು, ಖತರ್‌ನ ಕನ್ನಡ ಸಮುದಾಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.

ಅವರು ಈ ಜವಾಬ್ದಾರಿಯನ್ನು ಅತ್ಯಂತ ನಮ್ರತೆ ಮತ್ತು ಬದ್ಧತೆಯಿಂದ ಸ್ವೀಕರಿಸಿರುವುದಾಗಿ ತಿಳಿಸಿ, ಸಮುದಾಯಕ್ಕೆ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ಗೌರವದ ಸಂಗತಿಯಾಗಿದೆ ಎಂದು ಹೇಳಿದರು.

ನಿಕಟ ಪೂರ್ವ ಅಧ್ಯಕ್ಷರಾದ ರವಿ ಶೆಟ್ಟಿ ಹಾಗೂ ಆಡಳಿತ ಸಮಿತಿ (2024–2026) ಅವರ ಸೇವೆ ಮತ್ತು ಕೊಡುಗೆಗಳನ್ನು ಅವರು ಕೃತಜ್ಞತೆಯಿಂದ ಸ್ಮರಿಸಿದರು. ಅವರ ಶ್ರಮದಿಂದ ಸಂಘದ ಅಭಿವೃದ್ದಿಗೆ ಬಲವಾದ ಅಡಿಪಾಯ ನಿರ್ಮಾಣವಾಗಿದೆ ಎಂದು ಹೇಳಿದರು.

ಸಂಘದ ಎಲ್ಲಾ ಪೂರ್ವ ಅಧ್ಯಕ್ಷರಾದ ಸತೀಶ್ ದೇಶಪಾಂಡೆ, ನಾಗರಾಜ್, ಪ್ರಕಾಶ್ ಬಾಬು, ಕೆ. ಪ್ರಭಾಕರ್, ಅರವಿಂದ ಪಾಟೀಲ, ಅರುಣ್ ಕುಮಾರ್ ಕೆ.ಎಂ., ವಿ.ಎಸ್. ಮನ್ನಂಗಿ, ದೀಪಕ್ ಶೆಟ್ಟಿ, ಎಚ್.ಕೆ. ಮಧು, ವೆಂಕಟ್ ರಾವ್, ದಿವಂಗತ ಮೈರ್ಪಾಡಿ ನಾಗೇಶ್ ರಾವ್, ಸಂಜಯ ಕುದರಿ, ಮಹೇಶ್ ಗೌಡ ಹಾಗೂ ರವಿ ಶೆಟ್ಟಿ ಅವರ ಸೇವೆಯನ್ನು ಅವರು ಸ್ಮರಿಸಿ ಪ್ರಶಂಸಿಸಿದರು.

ಸಂಘದ ಎಲ್ಲಾ ಸಮಿತಿ ಸದಸ್ಯರು, ಸಮುದಾಯ ಮುಖಂಡರು ಮತ್ತು ಸದಸ್ಯರ ನಿರಂತರ ಸೇವೆ ಹಾಗೂ ಸಮರ್ಪಣೆಯನ್ನು ಅವರು ಶ್ಲಾಘಿಸಿದರು.

ಮುಂದಿನ ಅವಧಿಯಲ್ಲಿ ಕನ್ನಡ ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವುದು, ಸಂಸ್ಕೃತಿಯನ್ನು ಉತ್ತೇಜಿಸುವುದು ಮತ್ತು ಎಲ್ಲರಿಗೂ ಅರ್ಥಪೂರ್ಣ ಅವಕಾಶಗಳನ್ನು ಸೃಷ್ಟಿಸುವುದು ತಮ್ಮ ಗುರಿಯಾಗಿದೆ ಎಂದು ಅವರು ತಿಳಿಸಿದರು.

ಒಗ್ಗಟ್ಟಿನಿಂದ ಮತ್ತು ಉದ್ದೇಶಪೂರ್ವಕವಾಗಿ ನಾವು ಮುಂದೆ ಸಾಗಿದರೆ, ಇನ್ನಷ್ಟು ಮೈಲಿಗಲ್ಲುಗಳನ್ನು ಸಾಧಿಸಬಹುದು ಎಂದು ಸುಬ್ರಹ್ಮಣ್ಯ ಹೆಬ್ಬಾಗಿಲು ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕ ಸಂಘ ಖತರ್ ಭಾರತೀಯ ರಾಯಭಾರ ಕಚೇರಿಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಹಾಯಕ ಸಂಸ್ಥೆಯಾಗಿದ್ದು, ಖತರ್‌ನ ಕನ್ನಡಿಗರ ಪ್ರಮುಖ ವೇದಿಕೆಯಾಗಿದೆ.

Hot this week

ಬಹರೈನ್; ಆಗಸ್ಟ್ 21ರಂದು ‘ಕೆಸಿಎಫ್’ನಿಂದ ಗ್ರ್ಯಾಂಡ್ ಮೀಲಾದ್ ಕಾನ್ಫರೆನ್ಸ್

ಮನಾಮ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ...

ಭಾರತೀಯ ರಾಯಭಾರ ಕಚೇರಿಯ ಡಾ.ಈಶ್ ಸಿಂಘಾಲ್​​ಗೆ ಭಾವಪೂರ್ಣ ಬೀಳ್ಕೊಡುಗೆ; ಕರ್ನಾಟಕ ಸಂಘ ಖತರ್‌ನಿಂದ ಅಭಿನಂದನೆ

ದೋಹಾ(ಖತರ್): ಖತರ್‌ನಲ್ಲಿ ತಮ್ಮ ಸೇವಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಭಾರತೀಯ ರಾಯಭಾರ ಕಚೇರಿಯ...

ವಂದೇ ಮಾತರಂ ಮತ್ತು ಜನಗಣಮನ ಗೀತೆಯೊಂದಿಗೆ ಅಮೇರಿಕದಲ್ಲಿ ಗೃಹಪ್ರವೇಶ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ 1875ರಲ್ಲಿ ಭಾರತದಲ್ಲಿ ಮೊಳಗಿದ ‘ವಂದೇ ಮಾತರಂ’ 150...

ದುಬೈ; ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಸಾಮಾಜಿಕ ಸಮ್ಮಿಲನ ಕಾರ್ಯಕ್ರಮ

ದುಬೈ: ಪರಿಸರ ಸಂರಕ್ಷಣೆ, ಸಾಮಾಜಿಕ ಜಾಗೃತಿ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಬದ್ಧವಾಗಿರುವ...

ನ್ಯೂಯಾರ್ಕ್; ಆಲ್ಬನಿಯಲ್ಲಿ ಸಂಭ್ರಮದ ಕನ್ನಡ ಕಲಿ ಪದವಿ ಪ್ರದಾನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಆಲ್ಬನಿ(ನ್ಯೂಯಾರ್ಕ್): ಅಮೇರಿಕದಲ್ಲಿ ಹುಟ್ಟಿ ಬೆಳೆಯುತ್ತಿರುವ ಮಕ್ಕಳಿಗೆ ಕನ್ನಡ...

Related Articles

Popular Categories