ಖತರ್ಖತರ್‌ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ...

ಖತರ್‌ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ಸ್ವೀಕಾರ

ದೋಹಾ(ಖತರ್):ಕರ್ನಾಟಕ ಸಂಘ ಖತರ್‌ನ 2026–2028 ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ಸ್ವೀಕರಿಸಿದ್ದು, ಖತರ್‌ನ ಕನ್ನಡ ಸಮುದಾಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.

ಅವರು ಈ ಜವಾಬ್ದಾರಿಯನ್ನು ಅತ್ಯಂತ ನಮ್ರತೆ ಮತ್ತು ಬದ್ಧತೆಯಿಂದ ಸ್ವೀಕರಿಸಿರುವುದಾಗಿ ತಿಳಿಸಿ, ಸಮುದಾಯಕ್ಕೆ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ಗೌರವದ ಸಂಗತಿಯಾಗಿದೆ ಎಂದು ಹೇಳಿದರು.

ನಿಕಟ ಪೂರ್ವ ಅಧ್ಯಕ್ಷರಾದ ರವಿ ಶೆಟ್ಟಿ ಹಾಗೂ ಆಡಳಿತ ಸಮಿತಿ (2024–2026) ಅವರ ಸೇವೆ ಮತ್ತು ಕೊಡುಗೆಗಳನ್ನು ಅವರು ಕೃತಜ್ಞತೆಯಿಂದ ಸ್ಮರಿಸಿದರು. ಅವರ ಶ್ರಮದಿಂದ ಸಂಘದ ಅಭಿವೃದ್ದಿಗೆ ಬಲವಾದ ಅಡಿಪಾಯ ನಿರ್ಮಾಣವಾಗಿದೆ ಎಂದು ಹೇಳಿದರು.

ಸಂಘದ ಎಲ್ಲಾ ಪೂರ್ವ ಅಧ್ಯಕ್ಷರಾದ ಸತೀಶ್ ದೇಶಪಾಂಡೆ, ನಾಗರಾಜ್, ಪ್ರಕಾಶ್ ಬಾಬು, ಕೆ. ಪ್ರಭಾಕರ್, ಅರವಿಂದ ಪಾಟೀಲ, ಅರುಣ್ ಕುಮಾರ್ ಕೆ.ಎಂ., ವಿ.ಎಸ್. ಮನ್ನಂಗಿ, ದೀಪಕ್ ಶೆಟ್ಟಿ, ಎಚ್.ಕೆ. ಮಧು, ವೆಂಕಟ್ ರಾವ್, ದಿವಂಗತ ಮೈರ್ಪಾಡಿ ನಾಗೇಶ್ ರಾವ್, ಸಂಜಯ ಕುದರಿ, ಮಹೇಶ್ ಗೌಡ ಹಾಗೂ ರವಿ ಶೆಟ್ಟಿ ಅವರ ಸೇವೆಯನ್ನು ಅವರು ಸ್ಮರಿಸಿ ಪ್ರಶಂಸಿಸಿದರು.

ಸಂಘದ ಎಲ್ಲಾ ಸಮಿತಿ ಸದಸ್ಯರು, ಸಮುದಾಯ ಮುಖಂಡರು ಮತ್ತು ಸದಸ್ಯರ ನಿರಂತರ ಸೇವೆ ಹಾಗೂ ಸಮರ್ಪಣೆಯನ್ನು ಅವರು ಶ್ಲಾಘಿಸಿದರು.

ಮುಂದಿನ ಅವಧಿಯಲ್ಲಿ ಕನ್ನಡ ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವುದು, ಸಂಸ್ಕೃತಿಯನ್ನು ಉತ್ತೇಜಿಸುವುದು ಮತ್ತು ಎಲ್ಲರಿಗೂ ಅರ್ಥಪೂರ್ಣ ಅವಕಾಶಗಳನ್ನು ಸೃಷ್ಟಿಸುವುದು ತಮ್ಮ ಗುರಿಯಾಗಿದೆ ಎಂದು ಅವರು ತಿಳಿಸಿದರು.

ಒಗ್ಗಟ್ಟಿನಿಂದ ಮತ್ತು ಉದ್ದೇಶಪೂರ್ವಕವಾಗಿ ನಾವು ಮುಂದೆ ಸಾಗಿದರೆ, ಇನ್ನಷ್ಟು ಮೈಲಿಗಲ್ಲುಗಳನ್ನು ಸಾಧಿಸಬಹುದು ಎಂದು ಸುಬ್ರಹ್ಮಣ್ಯ ಹೆಬ್ಬಾಗಿಲು ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕ ಸಂಘ ಖತರ್ ಭಾರತೀಯ ರಾಯಭಾರ ಕಚೇರಿಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಹಾಯಕ ಸಂಸ್ಥೆಯಾಗಿದ್ದು, ಖತರ್‌ನ ಕನ್ನಡಿಗರ ಪ್ರಮುಖ ವೇದಿಕೆಯಾಗಿದೆ.

Hot this week

ಫ್ಲೋರಿಡಾ ತುಳು ಕೂಟದ 5ನೇ ವಾರ್ಷಿಕೋತ್ಸವ: ಸಂಭ್ರಮದ ಪಿಕ್ನಿಕ್‌ನೊಂದಿಗೆ ಸಂಸ್ಕೃತಿಯ ಅನಾವರಣ

ಪೊಂಪಾನೋ ಬೀಚ್(ಫ್ಲೋರಿಡಾ): ಫ್ಲೋರಿಡಾ ತುಳು ಕೂಟವು ತನ್ನ ಐದನೇ ವರ್ಷದ ಸಂಭ್ರಮವನ್ನು...

ಅಬುಧಾಬಿಗೆ ಸಚಿವ ಡಾ.ಜೈಶಂಕರ್ ಭೇಟಿ; ಕನ್ನಡಿಗರ ಕೂಟ ದುಬೈ-ಅಬುಧಾಬಿ ಕರ್ನಾಟಕ ಸಂಘ ಪ್ರತಿನಿಧಿತ್ವ

ಅಬುಧಾಬಿ: ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು...

ದುಬೈ; ‘ಬ್ಯಾರೀಸ್ ಪ್ರೀಮಿಯರ್ ಲೀಗ್-2026’ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕ್ರೌನ್ ಹೊನ್ನಾವರ; ನಫೀಸ್ ಗ್ರೂಪ್ ರನ್ನರ್ ಅಪ್

ದುಬೈ: ಶಾರ್ಜಾದ ಬಿಜೋಯ್ಸ್ ಕ್ರಿಕೆಟ್ ಕ್ರೀಡಾಗಂಣದಲ್ಲಿ ರವಿವಾರ ನಡೆದ 'ಬ್ಯಾರೀಸ್ ಪ್ರೀಮಿಯರ್...

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಆಯ್ಕೆ

ದುಬೈ: ಕರ್ನಾಟಕ ಸಂಘ ಶಾರ್ಜಾ ಇದರ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ...

Related Articles

Popular Categories