ಆಸ್ಟ್ರೇಲಿಯಸಿಬ್ಬಂದಿ ಮುಷ್ಕರ: ನ್ಯೂ ಸೌತ್‌ ವೇಲ್ಸ್ ಸಾರಿಗೆಯಲ್ಲಿ ಭಾರೀ...

ಸಿಬ್ಬಂದಿ ಮುಷ್ಕರ: ನ್ಯೂ ಸೌತ್‌ ವೇಲ್ಸ್ ಸಾರಿಗೆಯಲ್ಲಿ ಭಾರೀ ವ್ಯತ್ಯಯ

 ಸಿಡ್ನಿ: ಸಿಬ್ಬಂದಿಗಳ ಮುಷ್ಕರದ ಕಾರಣದಿಂದಾಗಿ ಆಸ್ಟ್ರೇಲಿಯಾದ ನೂರಾರು ರೈಲು ಸಂಚಾರಗಳನ್ನು ಸ್ಥಗಿತಗೊಳಿಸಿದ್ದು, ಸಂಚಾರ ವ್ಯವಸ್ಥೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.

ಹೊಸ ವರ್ಷದ ಅವಧಿಯಲ್ಲಿ ರೈಲು ಸಂಚಾರವನ್ನು ಸ್ಥಗಿತಗೊಳಿಸಿರುವುದರ ಕುರಿತು ನ್ಯೂ ಸೌತ್‌ ವೇಲ್ಸ್‌ ನ ಸಾರಿಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದು, ಹೊಸ ವರ್ಷದ ಅವಧಿಯಲ್ಲಿ ಮುಷ್ಕರ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

“ನಾವು ಈ ಹಿಂದೆಯೇ ಪರ್ಯಾಯ ವ್ಯವಸ್ಥೆಗಳನ್ನು ಮಾಡಲು ಹಲವು ಬಾರಿ ಸೂಚನೆ ನೀಡಿದ್ದೇವೆ” ಎಂದು ರೈಲು, ಟ್ರಾಮ್ ಮತ್ತು ಬಸ್ ಯೂನಿಯನ್ (RTBU) ಹೇಳಿದೆ. ವೇತನ ಹೆಚ್ಚಳ ಮತ್ತು ಕೆಲಸದ ಪರಿಸ್ಥಿತಿಗಳಲ್ಲಿ ಸುಧಾರಣೆಗಾಗಿ ರೈಲು, ಟ್ರಾಮ್ ಮತ್ತು ಬಸ್ ಯೂನಿಯನ್ ಮುಷ್ಕರ ನಡೆಸುತ್ತಿದೆ.

ಸಾರಿಗೆ ಸಚಿವ ಜೋ ಹೇಲೆನ್ ಪ್ರಕಾರ, ಶನಿವಾರದಂದು ಸುಮಾರು 40% ರೈಲು ಸೇವೆಗಳು ರದ್ದುಗೊಳ್ಳುವ ಅಥವಾ ವಿಳಂಬವಾಗುವ ನಿರೀಕ್ಷೆಯಿದ್ದು, ಜನರು ಅನಿವಾರ್ಯವಲ್ಲದ ಪ್ರಯಾಣವನ್ನು ಕೈಗೊಳ್ಳದಂತೆ ಎಚ್ಚರಿಕೆ ನೀಡಿದ್ದಾರೆ.

ಸಿಡ್ನಿ ರೈಲುಗಳ CEO, ಮ್ಯಾಥ್ಯೂ ಲಾಂಗ್‌ಲ್ಯಾಂಡ್, ದಿನವಿಡೀ 350 ಕ್ಕೂ ಹೆಚ್ಚು ರೈಲು ಸೇವೆಗಳನ್ನು ರದ್ದುಗೊಳಿಸಲಾಗುವುದು ಎಂದು ಹೇಳಿಕೆ ನೀಡಿದ್ದಾಗಿ ತಿಳಿದು ಬಂದಿದೆ.

ರೈಲುಗಳಲ್ಲಿ ಪ್ರಯಾಣಿಸುವುದನ್ನು ಬಿಟ್ಟು ಬಸ್, ಟ್ರಾಮ್, ಲಘು ರೈಲು ಅಥವಾ ಮೆಟ್ರೋದಂತಹ ಇತರ ಸಾರಿಗೆ ವಿಧಾನಗಳ ಮೂಲಕ ಪ್ರಯಾಣ ಮಾಡುವಂತೆ ಅವರು ತಿಳಿಸಿದ್ದಾರೆ.

ಕ್ರಿಸ್ಮಸ್ ಮತ್ತು ಹೊಸ ವರ್ಷದ ಮುನ್ನಾದಿನದಂದು ಅತ್ಯಂತ ಹೆಚ್ಚು ಅಡೆತಡೆಗಳಾಗುವ ಸಾಧ್ಯತೆಯಿದೆಯೆಂದು ಪ್ರಯಾಣಿಕರಿಗೆ ಎಚ್ಚರಿಕೆ ನೀಡಲಾಗಿದೆ. ಈ ರೈಲು ಮುಷ್ಕರದ ಕಾರಣದಿಂದಾಗಿ ಸಿಡ್ನಿಯಲ್ಲಿ ವರ್ಷಂಪ್ರತಿ ನಡೆಯುತ್ತಿದ್ದ ಹೊಸ ವರ್ಷದ ಖ್ಯಾತ ಸಿಡಿಮದ್ದು ಪ್ರದರ್ಶನವನ್ನೂ ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ.

Hot this week

Kuwait: KCWA’s annual family picnic draws over 600 attendees at Mishref Garden

Kuwait: The Kuwait Canara Welfare Association (KCWA) organised its...

ಖತರ್‌ನಲ್ಲಿ ಕರಾವಳಿ ಕನ್ನಡಿಗನ ಸಾಧನೆ; ಅಂಡರ್ 19 ಕ್ರಿಕೆಟ್ ತಂಡಕ್ಕೆ ಮಂಗಳೂರು ಮೂಲದ ಎಸ್ಸಾಮ್ ಮನ್ಸೂರ್ ಆಯ್ಕೆ

ದೋಹಾ: ಕರ್ನಾಟಕದ ಮಂಗಳೂರು ಮೂಲದ ಯುವಕ ಎಸ್ಸಾಮ್ ಮನ್ಸೂರ್, ಖತರ್ ಅಂಡರ್...

ರೊನಾಲ್ಡ್ ಮಾರ್ಟಿಸ್​ಗೆ ಶಾರ್ಜಾ ಕರ್ನಾಟಕ ಸಂಘದಿಂದ ‘ಮಯೂರ-ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

ದುಬೈ: ದುಬೈನಲ್ಲಿ ಇರುವ ಕನ್ನಡ ಪರ ಸಂಘಟನೆಗಳಲ್ಲಿ ಅರ್ಥಪೂರ್ಣ ಕಾರ್ಯಕ್ರಮ ಮಾಡುವುದರಲ್ಲಿ...

ಖತರ್‌ನಲ್ಲಿ ಕರ್ನಾಟಕ ರಾಜ್ಯೋತ್ಸವ – ರಜತ ಸಂಭ್ರಮ ಸಮಾರೋಪ: ಗಲ್ಫ್ ನಾಡಿನಲ್ಲಿ ಗಂಧದ ನಾಡಿನ ವೈಭವ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ)ನ ಕರ್ನಾಟಕ ರಾಜ್ಯೋತ್ಸವ – ರಜತ...

ದುಬೈ: ಕನ್ನಡಿಗರ ಕೂಟದಿಂದ ʼಕನ್ನಡ ರಾಜ್ಯೋತ್ಸವ 2025ʼ ಭವ್ಯ ಸಂಭ್ರಮ

ದುಬೈ: ಕನ್ನಡಿಗರ ಕೂಟ – ದುಬೈ ಮತ್ತು ಗಲ್ಫ್ ಕನ್ನಡ ಮೂವೀಸ್...

Related Articles

Popular Categories