ಆಸ್ಟ್ರೇಲಿಯಸಿಬ್ಬಂದಿ ಮುಷ್ಕರ: ನ್ಯೂ ಸೌತ್‌ ವೇಲ್ಸ್ ಸಾರಿಗೆಯಲ್ಲಿ ಭಾರೀ...

ಸಿಬ್ಬಂದಿ ಮುಷ್ಕರ: ನ್ಯೂ ಸೌತ್‌ ವೇಲ್ಸ್ ಸಾರಿಗೆಯಲ್ಲಿ ಭಾರೀ ವ್ಯತ್ಯಯ

 ಸಿಡ್ನಿ: ಸಿಬ್ಬಂದಿಗಳ ಮುಷ್ಕರದ ಕಾರಣದಿಂದಾಗಿ ಆಸ್ಟ್ರೇಲಿಯಾದ ನೂರಾರು ರೈಲು ಸಂಚಾರಗಳನ್ನು ಸ್ಥಗಿತಗೊಳಿಸಿದ್ದು, ಸಂಚಾರ ವ್ಯವಸ್ಥೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.

ಹೊಸ ವರ್ಷದ ಅವಧಿಯಲ್ಲಿ ರೈಲು ಸಂಚಾರವನ್ನು ಸ್ಥಗಿತಗೊಳಿಸಿರುವುದರ ಕುರಿತು ನ್ಯೂ ಸೌತ್‌ ವೇಲ್ಸ್‌ ನ ಸಾರಿಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದು, ಹೊಸ ವರ್ಷದ ಅವಧಿಯಲ್ಲಿ ಮುಷ್ಕರ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

“ನಾವು ಈ ಹಿಂದೆಯೇ ಪರ್ಯಾಯ ವ್ಯವಸ್ಥೆಗಳನ್ನು ಮಾಡಲು ಹಲವು ಬಾರಿ ಸೂಚನೆ ನೀಡಿದ್ದೇವೆ” ಎಂದು ರೈಲು, ಟ್ರಾಮ್ ಮತ್ತು ಬಸ್ ಯೂನಿಯನ್ (RTBU) ಹೇಳಿದೆ. ವೇತನ ಹೆಚ್ಚಳ ಮತ್ತು ಕೆಲಸದ ಪರಿಸ್ಥಿತಿಗಳಲ್ಲಿ ಸುಧಾರಣೆಗಾಗಿ ರೈಲು, ಟ್ರಾಮ್ ಮತ್ತು ಬಸ್ ಯೂನಿಯನ್ ಮುಷ್ಕರ ನಡೆಸುತ್ತಿದೆ.

ಸಾರಿಗೆ ಸಚಿವ ಜೋ ಹೇಲೆನ್ ಪ್ರಕಾರ, ಶನಿವಾರದಂದು ಸುಮಾರು 40% ರೈಲು ಸೇವೆಗಳು ರದ್ದುಗೊಳ್ಳುವ ಅಥವಾ ವಿಳಂಬವಾಗುವ ನಿರೀಕ್ಷೆಯಿದ್ದು, ಜನರು ಅನಿವಾರ್ಯವಲ್ಲದ ಪ್ರಯಾಣವನ್ನು ಕೈಗೊಳ್ಳದಂತೆ ಎಚ್ಚರಿಕೆ ನೀಡಿದ್ದಾರೆ.

ಸಿಡ್ನಿ ರೈಲುಗಳ CEO, ಮ್ಯಾಥ್ಯೂ ಲಾಂಗ್‌ಲ್ಯಾಂಡ್, ದಿನವಿಡೀ 350 ಕ್ಕೂ ಹೆಚ್ಚು ರೈಲು ಸೇವೆಗಳನ್ನು ರದ್ದುಗೊಳಿಸಲಾಗುವುದು ಎಂದು ಹೇಳಿಕೆ ನೀಡಿದ್ದಾಗಿ ತಿಳಿದು ಬಂದಿದೆ.

ರೈಲುಗಳಲ್ಲಿ ಪ್ರಯಾಣಿಸುವುದನ್ನು ಬಿಟ್ಟು ಬಸ್, ಟ್ರಾಮ್, ಲಘು ರೈಲು ಅಥವಾ ಮೆಟ್ರೋದಂತಹ ಇತರ ಸಾರಿಗೆ ವಿಧಾನಗಳ ಮೂಲಕ ಪ್ರಯಾಣ ಮಾಡುವಂತೆ ಅವರು ತಿಳಿಸಿದ್ದಾರೆ.

ಕ್ರಿಸ್ಮಸ್ ಮತ್ತು ಹೊಸ ವರ್ಷದ ಮುನ್ನಾದಿನದಂದು ಅತ್ಯಂತ ಹೆಚ್ಚು ಅಡೆತಡೆಗಳಾಗುವ ಸಾಧ್ಯತೆಯಿದೆಯೆಂದು ಪ್ರಯಾಣಿಕರಿಗೆ ಎಚ್ಚರಿಕೆ ನೀಡಲಾಗಿದೆ. ಈ ರೈಲು ಮುಷ್ಕರದ ಕಾರಣದಿಂದಾಗಿ ಸಿಡ್ನಿಯಲ್ಲಿ ವರ್ಷಂಪ್ರತಿ ನಡೆಯುತ್ತಿದ್ದ ಹೊಸ ವರ್ಷದ ಖ್ಯಾತ ಸಿಡಿಮದ್ದು ಪ್ರದರ್ಶನವನ್ನೂ ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ.

Hot this week

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

ಬಹರೈನ್‌; ‘ಕೆಸಿಎಫ್’ನಿಂದ ಈದ್ ಮಿಲಾದ್ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ

ಮನಾಮ: ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್) ಬಹರೈನ್‌ ವತಿಯಿಂದ ಪ್ರವಾದಿ ಮುಹಮ್ಮದ್‌ರವರ...

ಅಮೇರಿಕ; ಭಕ್ತಿ, ಬಸವತತ್ವ, ನಾಟಕ-ನೃತ್ಯ ವೈಭವದಿಂದ ಕಂಗೊಳಿಸಿದ VSNA ಮಹಾಸಮ್ಮೇಳನದ ಎರಡನೇ ದಿನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಸ್ಯಾನ್‌ಫೋರ್ಡ್ (ಉತ್ತರ ಕೆರೊಲಿನಾ: 48ನೇ ವೀರಶೈವ ಸೊಸೈಟಿ...

ಕನ್ನಡ ಸಂಘ ಬಹರೈನ್‌ನ ‘ಯಕ್ಷ ವೈಭವ 2026’ ಮುಹೂರ್ತ ಪೂಜೆ ಸಂಪನ್ನ

ಬಹರೈನ್‌: ಕನ್ನಡ ಸಂಘ ಬಹರೈನ್ ಅರ್ಪಿಸುವ ‘ಯಕ್ಷ ವೈಭವ 2026’ ರ...

ಅಮೇರಿಕ; ಉತ್ತರ ಕೆರೊಲಿನಾದಲ್ಲಿ 48ನೇ ವಿಎಸ್‌ಎನ್‌ಎ ಮಹಾಸಮ್ಮೇಳನಕ್ಕೆ ಅದ್ದೂರಿ ಚಾಲನೆ

-ಬೆಂಕಿ ಬಸಣ್ಣ, ಉತ್ತರ ಕೆರೊಲಿನಾ ಉತ್ತರ ಅಮೇರಿಕದ ವೀರಶೈವ-ಲಿಂಗಾಯತ ಸಮುದಾಯದ ಅತ್ಯಂತ ಹಿರಿಯ...

Related Articles

Popular Categories