ಯುಎಇಯುಎಇಯ ಖ್ಯಾತ ಸಾಹಿತಿ, ರಂಗಕರ್ಮಿ ಪ್ರಕಾಶ್ ರಾವ್ ಪಯ್ಯಾರ್​ಗೆ...

ಯುಎಇಯ ಖ್ಯಾತ ಸಾಹಿತಿ, ರಂಗಕರ್ಮಿ ಪ್ರಕಾಶ್ ರಾವ್ ಪಯ್ಯಾರ್​ಗೆ ದುಬೈಯಲ್ಲಿ ಶ್ರದ್ಧಾಂಜಲಿ ಸಭೆ

ದುಬೈ: ಯುಎಇಯ ಕನ್ನಡ ಸಾಹಿತ್ಯ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಅಸಾಮಾನ್ಯ ಸೇವೆ ಸಲ್ಲಿಸಿದ ಖ್ಯಾತ ಬರಹಗಾರ ಹಾಗೂ ರಂಗ ನಿರ್ದೇಶಕ ಪ್ರಕಾಶ್ ರಾವ್ ಪಯ್ಯಾರ್ ಇತ್ತೀಚೆಗೆ ನಿಧನರಾಗಿದ್ದು, ಅವರ ಸ್ಮರಣಾರ್ಥವಾಗಿ ಧ್ವನಿ ಪ್ರತಿಷ್ಠಾನವು ಶ್ರದ್ಧಾಂಜಲಿ ಸಭೆಯನ್ನು ಶುಕ್ರವಾರ ಸಂಜೆ ದುಬೈಯ ಅಬುಹೇಲ್‌ನಲ್ಲಿ ಆಯೋಜಿಸಿತ್ತು.

ಈ ಶ್ರದ್ಧಾಂಜಲಿ ಸಭೆಯಲ್ಲಿ ಪಯ್ಯಾರರ ಸಾಹಿತ್ಯ ಬಳಗದ ಮಿತ್ರರು, ರಂಗಭೂಮಿ ಕಲಾವಿದರು, ಧ್ವನಿ ಪ್ರತಿಷ್ಠಾನದ ಸದಸ್ಯರು, ಅಭಿಮಾನಿಗಳು ಹಾಗೂ ಆತ್ಮೀಯ ಮಿತ್ರವೃಂದದವರು ಭಾಗವಹಿಸಿದ್ದರು.

ಸಭೆಯ ಆರಂಭದಲ್ಲಿ ದೀಪ ಬೆಳಗುವ ಮೂಲಕ ಪಯ್ಯಾರರ ಆತ್ಮಕ್ಕೆ ಶಾಂತಿಗಾಗಿ ಪ್ರಾರ್ಥಿಸಲಾಯಿತು. ನಂತರ ಹಲವಾರು ಮಂದಿ ಅವರ ಸಾಹಿತ್ಯ ಸಾಧನೆ, ರಂಗ ನಿರ್ದೇಶನ ಕೌಶಲ್ಯ ಮತ್ತು ಕನ್ನಡ ಸಂಸ್ಕೃತಿಯ ಬೆಳವಣಿಗೆಗೆ ನೀಡಿದ ಅಮೂಲ್ಯ ಕೊಡುಗೆಗಳ ಕುರಿತು ತಮ್ಮ ಭಾವಪೂರ್ಣ ಸ್ಮರಣಗಳನ್ನು ಹಂಚಿಕೊಂಡರು.

ಪಯ್ಯಾರರ ನಿಧನವು ಯುಎಇಯ ಕನ್ನಡ ಸಾಹಿತ್ಯ ಮತ್ತು ನಾಟಕ ಲೋಕಕ್ಕೆ ಭಾರೀ ನಷ್ಟವೆಂದು, ಅವರ ಸ್ಮರಣೆ ಸದಾ ಪ್ರೇರಣೆಯಾಗಿ ಉಳಿಯಲಿದೆ ಎಂದು ಎಲ್ಲರೂ ಅಭಿಪ್ರಾಯಪಟ್ಟರು. ಧ್ವನಿ ಪ್ರತಿಷ್ಠಾನವು ಮುಂದಿನ ದಿನಗಳಲ್ಲಿ ಅವರ ಅಪೂರ್ಣವಾಗಿ ಉಳಿದ ಮಹತ್ತರದ ಕನಸಾದ ಧ್ವನಿ ಪ್ರತಿಷ್ಠಾನದ 40ರ ಸಂಭ್ರಮದ ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆಯನ್ನೂ ಪ್ರಕಟಿಸಿತು.

Hot this week

DKSC ಕುವೈತ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾಗಿ ಅನ್ವರ್ ಸಾಹೇಬ್ ಕುಂಜಾಲ್ ಆಯ್ಕೆ

ಕುವೈತ್: ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (DKSC), ಇದರ ಕುವೈತ್ ರಾಷ್ಟ್ರೀಯ...

ಕರ್ನಾಟಕ ಸಂಘ ಖತರ್‌ನಿಂದ ರಮಝಾನ್‌ ಸೇವಾ ಕಾರ್ಯ: ಇಫ್ತಾರ್ ಆಹಾರ ಕಿಟ್‌ಗಳ ವಿತರಣೆ

ಕರ್ನಾಟಕ ಸಂಘ ಖತರ್‌ (KSQ), ರಮಝಾನ್‌ ಮಾಸದ ಪವಿತ್ರ ಚಟುವಟಿಕೆಗಳ ಭಾಗವಾಗಿ...

ಅಟ್ಲಾಂಟ ಒಕ್ಕಲಿಗರ ಕೂಟದಿಂದ ಪ್ರಥಮ ಸಮಾವೇಶ

ಕೆ. ಆರ್. ಶ್ರೀನಾಥ್, ಅಟ್ಲಾಂಟ ಅಟ್ಲಾಂಟ: ಫೆಬ್ರವರಿ 22ರ ರವಿವಾರದಂದು ಅಟ್ಲಾಂಟದಲ್ಲಿ ನೆಲಸಿರುವ...

AIM India Forum Delegation Meets Indian Ambassador to UAE

Abu Dhabi: A delegation from AIM India Forum met...

Konkani movie ‘My Dear Father’ thrills audience in Kuwait with double premiere shows

Kuwait: The Konkani film My Dear Father was screened...

Related Articles

Popular Categories