ಯುಎಇಯುಎಇಯ ಖ್ಯಾತ ಸಾಹಿತಿ, ರಂಗಕರ್ಮಿ ಪ್ರಕಾಶ್ ರಾವ್ ಪಯ್ಯಾರ್​ಗೆ...

ಯುಎಇಯ ಖ್ಯಾತ ಸಾಹಿತಿ, ರಂಗಕರ್ಮಿ ಪ್ರಕಾಶ್ ರಾವ್ ಪಯ್ಯಾರ್​ಗೆ ದುಬೈಯಲ್ಲಿ ಶ್ರದ್ಧಾಂಜಲಿ ಸಭೆ

ದುಬೈ: ಯುಎಇಯ ಕನ್ನಡ ಸಾಹಿತ್ಯ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಅಸಾಮಾನ್ಯ ಸೇವೆ ಸಲ್ಲಿಸಿದ ಖ್ಯಾತ ಬರಹಗಾರ ಹಾಗೂ ರಂಗ ನಿರ್ದೇಶಕ ಪ್ರಕಾಶ್ ರಾವ್ ಪಯ್ಯಾರ್ ಇತ್ತೀಚೆಗೆ ನಿಧನರಾಗಿದ್ದು, ಅವರ ಸ್ಮರಣಾರ್ಥವಾಗಿ ಧ್ವನಿ ಪ್ರತಿಷ್ಠಾನವು ಶ್ರದ್ಧಾಂಜಲಿ ಸಭೆಯನ್ನು ಶುಕ್ರವಾರ ಸಂಜೆ ದುಬೈಯ ಅಬುಹೇಲ್‌ನಲ್ಲಿ ಆಯೋಜಿಸಿತ್ತು.

ಈ ಶ್ರದ್ಧಾಂಜಲಿ ಸಭೆಯಲ್ಲಿ ಪಯ್ಯಾರರ ಸಾಹಿತ್ಯ ಬಳಗದ ಮಿತ್ರರು, ರಂಗಭೂಮಿ ಕಲಾವಿದರು, ಧ್ವನಿ ಪ್ರತಿಷ್ಠಾನದ ಸದಸ್ಯರು, ಅಭಿಮಾನಿಗಳು ಹಾಗೂ ಆತ್ಮೀಯ ಮಿತ್ರವೃಂದದವರು ಭಾಗವಹಿಸಿದ್ದರು.

ಸಭೆಯ ಆರಂಭದಲ್ಲಿ ದೀಪ ಬೆಳಗುವ ಮೂಲಕ ಪಯ್ಯಾರರ ಆತ್ಮಕ್ಕೆ ಶಾಂತಿಗಾಗಿ ಪ್ರಾರ್ಥಿಸಲಾಯಿತು. ನಂತರ ಹಲವಾರು ಮಂದಿ ಅವರ ಸಾಹಿತ್ಯ ಸಾಧನೆ, ರಂಗ ನಿರ್ದೇಶನ ಕೌಶಲ್ಯ ಮತ್ತು ಕನ್ನಡ ಸಂಸ್ಕೃತಿಯ ಬೆಳವಣಿಗೆಗೆ ನೀಡಿದ ಅಮೂಲ್ಯ ಕೊಡುಗೆಗಳ ಕುರಿತು ತಮ್ಮ ಭಾವಪೂರ್ಣ ಸ್ಮರಣಗಳನ್ನು ಹಂಚಿಕೊಂಡರು.

ಪಯ್ಯಾರರ ನಿಧನವು ಯುಎಇಯ ಕನ್ನಡ ಸಾಹಿತ್ಯ ಮತ್ತು ನಾಟಕ ಲೋಕಕ್ಕೆ ಭಾರೀ ನಷ್ಟವೆಂದು, ಅವರ ಸ್ಮರಣೆ ಸದಾ ಪ್ರೇರಣೆಯಾಗಿ ಉಳಿಯಲಿದೆ ಎಂದು ಎಲ್ಲರೂ ಅಭಿಪ್ರಾಯಪಟ್ಟರು. ಧ್ವನಿ ಪ್ರತಿಷ್ಠಾನವು ಮುಂದಿನ ದಿನಗಳಲ್ಲಿ ಅವರ ಅಪೂರ್ಣವಾಗಿ ಉಳಿದ ಮಹತ್ತರದ ಕನಸಾದ ಧ್ವನಿ ಪ್ರತಿಷ್ಠಾನದ 40ರ ಸಂಭ್ರಮದ ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆಯನ್ನೂ ಪ್ರಕಟಿಸಿತು.

Hot this week

ಜರ್ಮನಿ; ನಾಟ್ಯಫೆಸ್ಟ್ 2026: ಸಂಸ್ಕೃತಿ ಮತ್ತು ಸೃಜನಾತ್ಮಕತೆಯ ರಂಜಕ ವೇದಿಕೆ

ಫ್ರಾಂಕ್‌ಫರ್ಟ್‌ (ಜರ್ಮನಿ): ಇತ್ತೀಚೆಗೆ ಮ್ಯೂನಿಕ್‌ನ ಐನ್‌ಸ್ಟೈನ್ ಕಲ್ಚರ್ ವೇದಿಕೆ ನಾಟ್ಯಫೆಸ್ಟ್ 2026...

ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ದೋಹಾ(ಖತರ್‌): ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ...

ಜರ್ಮನಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಜಾನಪದ ವೈಭವ; ಸಂಸ್ಕೃತಿಯ ಗತ ವೈಭವ ಸೃಷ್ಟಿ

ಜರ್ಮನಿ: ರೈನ್ ಮೈನ್ ಕನ್ನಡ ಸಂಘದಿಂದ ಇದೇ ಮೊದಲ ಬಾರಿಗೆ ಶನಿವಾರ...

ಕನ್ನಡ ಸಂಘ ಬಹರೈನ್‌ನಿಂದ ಆರೋಗ್ಯ ದಿನ; ಉಚಿತ ವೈದ್ಯಕೀಯ ಶಿಬಿರ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಅಲ್ ಹಿಲಾಲ್ ಹೆಲ್ತ್ ಕೇರ್...

ಕರ್ನಾಟಕ ಸಂಘ ಖತರ್‌ಗೆ ನೂತನ ಆಡಳಿತ ಸಮಿತಿ ಆಯ್ಕೆ; 2026–2028 ಅವಧಿಗೆ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವಿರೋಧ ಆಯ್ಕೆ

ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ...

Related Articles

Popular Categories