ಯುಎಇಯುಎಇಯ ಖ್ಯಾತ ಸಾಹಿತಿ, ರಂಗಕರ್ಮಿ ಪ್ರಕಾಶ್ ರಾವ್ ಪಯ್ಯಾರ್​ಗೆ...

ಯುಎಇಯ ಖ್ಯಾತ ಸಾಹಿತಿ, ರಂಗಕರ್ಮಿ ಪ್ರಕಾಶ್ ರಾವ್ ಪಯ್ಯಾರ್​ಗೆ ದುಬೈಯಲ್ಲಿ ಶ್ರದ್ಧಾಂಜಲಿ ಸಭೆ

ದುಬೈ: ಯುಎಇಯ ಕನ್ನಡ ಸಾಹಿತ್ಯ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಅಸಾಮಾನ್ಯ ಸೇವೆ ಸಲ್ಲಿಸಿದ ಖ್ಯಾತ ಬರಹಗಾರ ಹಾಗೂ ರಂಗ ನಿರ್ದೇಶಕ ಪ್ರಕಾಶ್ ರಾವ್ ಪಯ್ಯಾರ್ ಇತ್ತೀಚೆಗೆ ನಿಧನರಾಗಿದ್ದು, ಅವರ ಸ್ಮರಣಾರ್ಥವಾಗಿ ಧ್ವನಿ ಪ್ರತಿಷ್ಠಾನವು ಶ್ರದ್ಧಾಂಜಲಿ ಸಭೆಯನ್ನು ಶುಕ್ರವಾರ ಸಂಜೆ ದುಬೈಯ ಅಬುಹೇಲ್‌ನಲ್ಲಿ ಆಯೋಜಿಸಿತ್ತು.

ಈ ಶ್ರದ್ಧಾಂಜಲಿ ಸಭೆಯಲ್ಲಿ ಪಯ್ಯಾರರ ಸಾಹಿತ್ಯ ಬಳಗದ ಮಿತ್ರರು, ರಂಗಭೂಮಿ ಕಲಾವಿದರು, ಧ್ವನಿ ಪ್ರತಿಷ್ಠಾನದ ಸದಸ್ಯರು, ಅಭಿಮಾನಿಗಳು ಹಾಗೂ ಆತ್ಮೀಯ ಮಿತ್ರವೃಂದದವರು ಭಾಗವಹಿಸಿದ್ದರು.

ಸಭೆಯ ಆರಂಭದಲ್ಲಿ ದೀಪ ಬೆಳಗುವ ಮೂಲಕ ಪಯ್ಯಾರರ ಆತ್ಮಕ್ಕೆ ಶಾಂತಿಗಾಗಿ ಪ್ರಾರ್ಥಿಸಲಾಯಿತು. ನಂತರ ಹಲವಾರು ಮಂದಿ ಅವರ ಸಾಹಿತ್ಯ ಸಾಧನೆ, ರಂಗ ನಿರ್ದೇಶನ ಕೌಶಲ್ಯ ಮತ್ತು ಕನ್ನಡ ಸಂಸ್ಕೃತಿಯ ಬೆಳವಣಿಗೆಗೆ ನೀಡಿದ ಅಮೂಲ್ಯ ಕೊಡುಗೆಗಳ ಕುರಿತು ತಮ್ಮ ಭಾವಪೂರ್ಣ ಸ್ಮರಣಗಳನ್ನು ಹಂಚಿಕೊಂಡರು.

ಪಯ್ಯಾರರ ನಿಧನವು ಯುಎಇಯ ಕನ್ನಡ ಸಾಹಿತ್ಯ ಮತ್ತು ನಾಟಕ ಲೋಕಕ್ಕೆ ಭಾರೀ ನಷ್ಟವೆಂದು, ಅವರ ಸ್ಮರಣೆ ಸದಾ ಪ್ರೇರಣೆಯಾಗಿ ಉಳಿಯಲಿದೆ ಎಂದು ಎಲ್ಲರೂ ಅಭಿಪ್ರಾಯಪಟ್ಟರು. ಧ್ವನಿ ಪ್ರತಿಷ್ಠಾನವು ಮುಂದಿನ ದಿನಗಳಲ್ಲಿ ಅವರ ಅಪೂರ್ಣವಾಗಿ ಉಳಿದ ಮಹತ್ತರದ ಕನಸಾದ ಧ್ವನಿ ಪ್ರತಿಷ್ಠಾನದ 40ರ ಸಂಭ್ರಮದ ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆಯನ್ನೂ ಪ್ರಕಟಿಸಿತು.

Hot this week

ದುಬೈ; ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನಲ್ಲಿ ಓಣಂ ಹಬ್ಬ ಆಚರಣೆ

ದುಬೈ : ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಫಾರ್ಚೂನ್ ಗ್ರೂಪ್...

ಕನ್ನಡಿಗರ ಕೂಟ ದುಬೈ ವತಿಯಿಂದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್‌ಗೆ ಸನ್ಮಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ತಂಡವು ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ...

ಫ್ಲೋರಿಡಾ ತುಳು ಕೂಟದ 2ನೇ ವಾರ್ಷಿಕ ಪೊಟ್ಲಕ್ ಪಿಕ್ನಿಕ್ ಸಂಭ್ರಮ

ಅಮೇರಿಕದ ಫ್ಲೋರಿಡಾ ತುಳು ಕೂಟವು ಇತ್ತೀಚೆಗೆ ಕ್ಯಾಸೆಲ್‌ಬೆರ್ರಿ ಒರ್ಲಾಂಡೊದಲ್ಲಿ ತನ್ನ ಎರಡನೇ...

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

Related Articles

Popular Categories