ಯುಎಇಯುಎಇಯ ಖ್ಯಾತ ಸಾಹಿತಿ, ರಂಗಕರ್ಮಿ ಪ್ರಕಾಶ್ ರಾವ್ ಪಯ್ಯಾರ್​ಗೆ...

ಯುಎಇಯ ಖ್ಯಾತ ಸಾಹಿತಿ, ರಂಗಕರ್ಮಿ ಪ್ರಕಾಶ್ ರಾವ್ ಪಯ್ಯಾರ್​ಗೆ ದುಬೈಯಲ್ಲಿ ಶ್ರದ್ಧಾಂಜಲಿ ಸಭೆ

ದುಬೈ: ಯುಎಇಯ ಕನ್ನಡ ಸಾಹಿತ್ಯ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಅಸಾಮಾನ್ಯ ಸೇವೆ ಸಲ್ಲಿಸಿದ ಖ್ಯಾತ ಬರಹಗಾರ ಹಾಗೂ ರಂಗ ನಿರ್ದೇಶಕ ಪ್ರಕಾಶ್ ರಾವ್ ಪಯ್ಯಾರ್ ಇತ್ತೀಚೆಗೆ ನಿಧನರಾಗಿದ್ದು, ಅವರ ಸ್ಮರಣಾರ್ಥವಾಗಿ ಧ್ವನಿ ಪ್ರತಿಷ್ಠಾನವು ಶ್ರದ್ಧಾಂಜಲಿ ಸಭೆಯನ್ನು ಶುಕ್ರವಾರ ಸಂಜೆ ದುಬೈಯ ಅಬುಹೇಲ್‌ನಲ್ಲಿ ಆಯೋಜಿಸಿತ್ತು.

ಈ ಶ್ರದ್ಧಾಂಜಲಿ ಸಭೆಯಲ್ಲಿ ಪಯ್ಯಾರರ ಸಾಹಿತ್ಯ ಬಳಗದ ಮಿತ್ರರು, ರಂಗಭೂಮಿ ಕಲಾವಿದರು, ಧ್ವನಿ ಪ್ರತಿಷ್ಠಾನದ ಸದಸ್ಯರು, ಅಭಿಮಾನಿಗಳು ಹಾಗೂ ಆತ್ಮೀಯ ಮಿತ್ರವೃಂದದವರು ಭಾಗವಹಿಸಿದ್ದರು.

ಸಭೆಯ ಆರಂಭದಲ್ಲಿ ದೀಪ ಬೆಳಗುವ ಮೂಲಕ ಪಯ್ಯಾರರ ಆತ್ಮಕ್ಕೆ ಶಾಂತಿಗಾಗಿ ಪ್ರಾರ್ಥಿಸಲಾಯಿತು. ನಂತರ ಹಲವಾರು ಮಂದಿ ಅವರ ಸಾಹಿತ್ಯ ಸಾಧನೆ, ರಂಗ ನಿರ್ದೇಶನ ಕೌಶಲ್ಯ ಮತ್ತು ಕನ್ನಡ ಸಂಸ್ಕೃತಿಯ ಬೆಳವಣಿಗೆಗೆ ನೀಡಿದ ಅಮೂಲ್ಯ ಕೊಡುಗೆಗಳ ಕುರಿತು ತಮ್ಮ ಭಾವಪೂರ್ಣ ಸ್ಮರಣಗಳನ್ನು ಹಂಚಿಕೊಂಡರು.

ಪಯ್ಯಾರರ ನಿಧನವು ಯುಎಇಯ ಕನ್ನಡ ಸಾಹಿತ್ಯ ಮತ್ತು ನಾಟಕ ಲೋಕಕ್ಕೆ ಭಾರೀ ನಷ್ಟವೆಂದು, ಅವರ ಸ್ಮರಣೆ ಸದಾ ಪ್ರೇರಣೆಯಾಗಿ ಉಳಿಯಲಿದೆ ಎಂದು ಎಲ್ಲರೂ ಅಭಿಪ್ರಾಯಪಟ್ಟರು. ಧ್ವನಿ ಪ್ರತಿಷ್ಠಾನವು ಮುಂದಿನ ದಿನಗಳಲ್ಲಿ ಅವರ ಅಪೂರ್ಣವಾಗಿ ಉಳಿದ ಮಹತ್ತರದ ಕನಸಾದ ಧ್ವನಿ ಪ್ರತಿಷ್ಠಾನದ 40ರ ಸಂಭ್ರಮದ ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆಯನ್ನೂ ಪ್ರಕಟಿಸಿತು.

Hot this week

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

ಬಹರೈನ್‌; ‘ಕೆಸಿಎಫ್’ನಿಂದ ಈದ್ ಮಿಲಾದ್ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ

ಮನಾಮ: ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್) ಬಹರೈನ್‌ ವತಿಯಿಂದ ಪ್ರವಾದಿ ಮುಹಮ್ಮದ್‌ರವರ...

ಅಮೇರಿಕ; ಭಕ್ತಿ, ಬಸವತತ್ವ, ನಾಟಕ-ನೃತ್ಯ ವೈಭವದಿಂದ ಕಂಗೊಳಿಸಿದ VSNA ಮಹಾಸಮ್ಮೇಳನದ ಎರಡನೇ ದಿನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಸ್ಯಾನ್‌ಫೋರ್ಡ್ (ಉತ್ತರ ಕೆರೊಲಿನಾ: 48ನೇ ವೀರಶೈವ ಸೊಸೈಟಿ...

ಕನ್ನಡ ಸಂಘ ಬಹರೈನ್‌ನ ‘ಯಕ್ಷ ವೈಭವ 2026’ ಮುಹೂರ್ತ ಪೂಜೆ ಸಂಪನ್ನ

ಬಹರೈನ್‌: ಕನ್ನಡ ಸಂಘ ಬಹರೈನ್ ಅರ್ಪಿಸುವ ‘ಯಕ್ಷ ವೈಭವ 2026’ ರ...

ಅಮೇರಿಕ; ಉತ್ತರ ಕೆರೊಲಿನಾದಲ್ಲಿ 48ನೇ ವಿಎಸ್‌ಎನ್‌ಎ ಮಹಾಸಮ್ಮೇಳನಕ್ಕೆ ಅದ್ದೂರಿ ಚಾಲನೆ

-ಬೆಂಕಿ ಬಸಣ್ಣ, ಉತ್ತರ ಕೆರೊಲಿನಾ ಉತ್ತರ ಅಮೇರಿಕದ ವೀರಶೈವ-ಲಿಂಗಾಯತ ಸಮುದಾಯದ ಅತ್ಯಂತ ಹಿರಿಯ...

Related Articles

Popular Categories