ಯುಎಇಯುಎಇ ಬಸವ ಸಮಿತಿ - ಅಕ್ಕನ ಬಳಗದಿಂದ ದುಬೈಯಲ್ಲಿ...

ಯುಎಇ ಬಸವ ಸಮಿತಿ – ಅಕ್ಕನ ಬಳಗದಿಂದ ದುಬೈಯಲ್ಲಿ ಸಂಭ್ರಮದ ಮಕರ ಸಂಕ್ರಾತಿ ಆಚರಣೆ

ಯುಎಇ ಬಸವ ಸಮಿತಿ ದುಬೈ ಹಾಗು ಅಕ್ಕನ ಬಳಗದವರು ದುಬೈ ಕ್ರೀಕ್ ಪಾರ್ಕ್’ನಲ್ಲಿ ಇತ್ತೀಚಿಗೆ ಸಂಪ್ರದಾಯಬದ್ಧ ಮಕರ ಸಂಕ್ರಾಂತಿಯನ್ನು ಆಚರಿಸಿದರು.

ಉತ್ತರ ಕರ್ನಾಟಕದ ಜಾನಪದ ಸೊಗಡು ದುಬೈಯ ಮಣ್ಣಲ್ಲೂ ತನ್ನ ಕಂಪನ್ನು ಬೀರಿ ನಳನಳಿಸಿತು. ಸಾಂಪ್ರದಾಯಿಕ ಗಾದೆಗಳು, ಒಗಟುಗಳು, ಜಾನಪದ ಗೀತೆಗಳನ್ನು ಹಾಡಿ ನಲಿದರು. ದಂಪತಿಗಳಿಗೆ ವಿಶೇಷವಾದ ಜಾನಪದ ಫ್ಯಾಷನ್ ವಾಕ್ ಏರ್ಪಡಿಸಲಾಗಿತ್ತು . ಎಲ್ಲ ಮಹಿಳೆಯರು ಇಳಕಲ್ ಸೀರೆಯನ್ನುಟ್ಟು ಹಬ್ಬದ ಸಡಗರದಲ್ಲಿ ಪಾಲ್ಗೊಂಡಿದ್ದರು. ಪುರುಷರು, ಮಹಿಳೆಯರು , ಹಿರಿಯರು , ಕಿರಿಯರೆಲ್ಲರೂ ಭಾಗವಹಿಸಿದ ಆಚರಣೆಯಲ್ಲಿ ಸುಮಾರು 70ಕ್ಕೂ ಮಿಕ್ಕು ಕುಟುಂಬಗಳು ಭಾಗಿಯಾಗಿದ್ದವು.

ಉತ್ತರ ಕರ್ನಾಟಕದ ವಿಶೇಷ ಅಡುಗೆಗಳಾದ ಬದನೆ ಕಾಯಿ ಎಣ್ಣೆಗಾಯಿ, ಹೆಸರು ಕಾಳು ಪಲ್ಯ, ಜುಣಕ್ ವಡಿ, ಶೇಂಗಾ, ಅಗಸೆ, ಕೆಂಪು ಚಟ್ನಿಗಳು, ಚಪಾತಿ, ಜೋಳದ ರೊಟ್ಟಿ, ಪುಲಾವ್, ಮೊಸರನ್ನ, ಬುತ್ತಿ, ಹುಗ್ಗಿ, ಶೇಂಗಾ ಹೋಳಿಗೆ, ಎಳ್ಳು ಹೋಳಿಗೆ, ಹಪ್ಪಳ ಸೆಂಡಿಗೆಯನ್ನು 10ಕ್ಕೂ ಹೆಚ್ಚು ಮಹಿಳೆಯರು ತಮ್ಮ ಮನೆಯಲ್ಲಿ ಸ್ವತಃ ತಯಾರು ಮಾಡಿಕೊಂಡು ಬಂದು ಬಡಿಸಿದ್ದರು.

ಆಟೋಟ ಸ್ಪರ್ಧೆ, ಗಾಳಿಪಟ ಹಾರಿಸುವ ಕಾರ್ಯಕ್ರಮ, ಬಹುಮಾನ ವಿತರಣೆಯೊಂದಿಗೆ ಕಾರ್ಯಕ್ರಮ ಮುಗಿದಿದ್ದು ಹೆಂಗಳೆಯರನ್ನು ಅರಸಿನ ಕುಂಕುಮ ನೀಡಿ ಬೀಳ್ಕೊಡಲಾಯಿತು. ಈ ಕಾರ್ಯಕ್ರಮದಲ್ಲಿ ಬಸವ ಸಮಿತಿಯ ಅಧ್ಯಕ್ಷ ವೀರೇಶ್ ಪಾಟೀಲ್, ಸಲಹೆಗಾರರಾದ ಚಂದ್ರ ಶೇಖರ ಲಿಂಗದಳ್ಳಿ, ಮಲ್ಲಿಕಾರ್ಜುನ ಹವಾಲ್ದಾರ್, ಜಗದೀಶ್ ಲಾಲಿ, ಮೋಹನ್ ಬಿ .ಪಿ, ಆದರ್ಶ್ ಮತ್ತು ಅಕ್ಕನ ಬಳಗದ ರಾಜೇಶ್ವರಿ ಪಾಟೀಲ್, ಶಾಕುಂತಲ ಹವಾಲ್ದಾರ್, ಸುಷ್ಮಾ ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ವರದಿ: ಆರತಿ ಅಡಿಗ

Hot this week

ಕೊಲ್ಲಿ ಯುದ್ಧ; ಗಲ್ಫ್ ರಾಷ್ಟ್ರಗಳಲ್ಲಿ ಅಗತ್ಯವಸ್ತುಗಳ ಮೇಲೆ ಬೀರುತ್ತಿದೆ ಪರಿಣಾಮ!

ಸೌದಿ ಅರೇಬಿಯಾ: ಅಮೇರಿಕ-ಇಸ್ರೇಲ್ ಹಾಗೂ ಇರಾನ್ ಮಧ್ಯೆ ನಡುಯುತ್ತಿರುವ ಸಂಘರ್ಷವು ಮುಂದುವರಿಯುತ್ತಿರುವುದರಿಂದ...

ಸೌದಿ: ಅಲ್ ಖಮರ್ ವೆಲ್ಫೇರ್ ಅಸೋಸಿಯೇಷನ್‌ನಿಂದ ಇಫ್ತಾರ್ ಕೂಟ

ಸೌದಿ ಅರೇಬಿಯಾ: ರಮಝಾನ್ ಪವಿತ್ರ ತಿಂಗಳ ಅಂಗವಾಗಿ ಅಲ್ ಖಮರ್ ವೆಲ್ಫೇರ್...

Yakshagana staged in German for first time in Munich, children from Europe perform

Munich: In a significant moment for coastal Karnataka’s traditional...

ದುಬೈಯಲ್ಲಿ ಸಂಕಷ್ಟಕ್ಕೀಡಾಗಿರುವ ಪ್ರವಾಸಿ ಕನ್ನಡಿಗರಿಗೆ ಧೈರ್ಯ ತುಂಬಿದ ಎಂ.ಎ.ಗಫೂರ್

ದುಬೈ: ಅಮೇರಿಕ-ಇಸ್ರೇಲ್ ಹಾಗು ಇರಾನ್ ಮಧ್ಯೆಗಿನ ಸಂಘರ್ಷದಿಂದ ದುಬೈಯಲ್ಲಿ ಸಂಕಷ್ಟಕ್ಕೀಡಾಗಿರುವ ಕನ್ನಡಿಗ...

Related Articles

Popular Categories