ಯುಎಇglobalkannadiga.com ಭರ್ಜರಿ ಯಶಸ್ಸು ಕಾಣಲಿ

globalkannadiga.com ಭರ್ಜರಿ ಯಶಸ್ಸು ಕಾಣಲಿ

ಡಿಜಿಟಲ್ ಹಾಗು ದೃಶ್ಯ ಮಾಧ್ಯಮಗಳಲ್ಲೂ ಛಾಪು ಮೂಡಿಸಿರುವ ವಾರ್ತಾಭಾರತಿ ಅನಿವಾಸಿ ಕನ್ನಡಿಗರ ಬಗ್ಗೆ ವಿಶೇಷ ಪ್ರೀತಿ ಹಾಗು ಕಾಳಜಿಯಿಂದ ರೂಪಿಸಿರುವ ಹೊಸ ವೆಬ್ ಜಾಲತಾಣ globalkannadiga.com ಭರ್ಜರಿ ಯಶಸ್ಸು ಕಾಣಲಿ.

ಎರಡು ದಶಕಗಳಿಂದ ನಿರ್ಭೀತ ಪತ್ರಿಕೋದ್ಯಮ ನಡೆಸುತ್ತಿರುವ ‘ವಾರ್ತಾಭಾರತಿ’ ಜನಸಾಮಾನ್ಯರು ಹಾಗೂ ಸರಕಾರದ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ. ಪತ್ರಿಕೆಯ ಸಂಪಾದಕೀಯವು ಸರಕಾರ ಹಾಗೂ ಅಧಿಕಾರಿಗಳನ್ನು ನಿರಂತರವಾಗಿ ಎಚ್ಚರಿಸುತ್ತಿದೆ. ಪತ್ರಿಕೆಯಲ್ಲಿನ ವಿಶೇಷ ವರದಿಗಳು ಅದೆಷ್ಟೋ ಅವಕಾಶ ವಂಚಿತರಿಗೆ ಆಶಾಕಿರಣವಾಗಿದೆ. ಸಂವಿಧಾನದ ಆಶಯಗಳು ಈಡೇರಬೇಕಾದರೆ ಪ್ರಜಾಪ್ರಭುತ್ವದ ಮೌಲ್ಯಗಳು ಗಟ್ಟಿಗೊಳ್ಳಬೇಕು. ಅದಕ್ಕೆ ಪೂರಕವಾಗಿ ಮಾಧ್ಯಮಗಳು ಕೆಲಸ ನಿರ್ವಹಿಸಬೇಕಾಗುತ್ತದೆ. ಸದ್ಯ ಪ್ರಜಾಪ್ರಭುತ್ವದ ಉಳಿವಿಗೆ ಶ್ರಮಿಸಬೇಕಾದ ಅಗತ್ಯವಿದ್ದು, ಆ ನಿಟ್ಟಿನಲ್ಲಿ ವಾರ್ತಾಭಾರತಿ ಕನ್ನಡ ದಿನ ಪತ್ರಿಕೆ ಕೆಲಸ ಮಾಡುತ್ತಿದೆ ಇದು ಶ್ಲಾಘನೀಯ.

ಇದೀಗ ಇನ್ನೊಂದು ಹೆಜ್ಜೆ ಮುಂದಿಟ್ಟು ಡಿಜಿಟಲ್ ಹಾಗು ದೃಶ್ಯ ಮಾಧ್ಯಮಗಳಲ್ಲೂ ಛಾಪು ಮೂಡಿಸಿರುವ ವಾರ್ತಾಭಾರತಿ ಅನಿವಾಸಿ ಕನ್ನಡಿಗರ ಬಗ್ಗೆ ವಿಶೇಷ ಪ್ರೀತಿ ಹಾಗು ಕಾಳಜಿಯಿಂದ ರೂಪಿಸಿರುವ ಹೊಸ ವೆಬ್ ತಾಣ globalkannadiga.com ಎಂಬ ವೇದಿಕೆ ಸಜ್ಜು ಮಾಡಿದೆ. ಇದು ಭರ್ಜರಿ ಯಶಸ್ಸು ಕಾಣಲಿ, ಕರ್ನಾಟಕ ಸರಕಾರದ ಅನಿವಾಸಿ ಭಾರತೀಯ ಸಮಿತಿ ಹಾಗು ಅನಿವಾಸಿ ಕನ್ನಡಿಗರ ನಡುವಿನ ಸೇತುವೆಯಾಗಲಿ ಎಂದು ಹಾರೈಸುತ್ತೇನೆ.

ಅನ್ವರ್ ಮಾಣಿಲ ಯುಏಇ
ಸಂಯೋಜಕರು
ಕೆಪಿಸಿಸಿ, ಅನಿವಾಸಿ ಭಾರತೀಯ ವಿಭಾಗ
ಸಾಮಾಜಿಕ ಜಾಲತಾಣ ದಕ್ಷಿಣ ಕನ್ನಡ ಜಿಲ್ಲೆ

Hot this week

Kuwait: KCWA’s annual family picnic draws over 600 attendees at Mishref Garden

Kuwait: The Kuwait Canara Welfare Association (KCWA) organised its...

ಖತರ್‌ನಲ್ಲಿ ಕರಾವಳಿ ಕನ್ನಡಿಗನ ಸಾಧನೆ; ಅಂಡರ್ 19 ಕ್ರಿಕೆಟ್ ತಂಡಕ್ಕೆ ಮಂಗಳೂರು ಮೂಲದ ಎಸ್ಸಾಮ್ ಮನ್ಸೂರ್ ಆಯ್ಕೆ

ದೋಹಾ: ಕರ್ನಾಟಕದ ಮಂಗಳೂರು ಮೂಲದ ಯುವಕ ಎಸ್ಸಾಮ್ ಮನ್ಸೂರ್, ಖತರ್ ಅಂಡರ್...

ರೊನಾಲ್ಡ್ ಮಾರ್ಟಿಸ್​ಗೆ ಶಾರ್ಜಾ ಕರ್ನಾಟಕ ಸಂಘದಿಂದ ‘ಮಯೂರ-ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

ದುಬೈ: ದುಬೈನಲ್ಲಿ ಇರುವ ಕನ್ನಡ ಪರ ಸಂಘಟನೆಗಳಲ್ಲಿ ಅರ್ಥಪೂರ್ಣ ಕಾರ್ಯಕ್ರಮ ಮಾಡುವುದರಲ್ಲಿ...

ಖತರ್‌ನಲ್ಲಿ ಕರ್ನಾಟಕ ರಾಜ್ಯೋತ್ಸವ – ರಜತ ಸಂಭ್ರಮ ಸಮಾರೋಪ: ಗಲ್ಫ್ ನಾಡಿನಲ್ಲಿ ಗಂಧದ ನಾಡಿನ ವೈಭವ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ)ನ ಕರ್ನಾಟಕ ರಾಜ್ಯೋತ್ಸವ – ರಜತ...

ದುಬೈ: ಕನ್ನಡಿಗರ ಕೂಟದಿಂದ ʼಕನ್ನಡ ರಾಜ್ಯೋತ್ಸವ 2025ʼ ಭವ್ಯ ಸಂಭ್ರಮ

ದುಬೈ: ಕನ್ನಡಿಗರ ಕೂಟ – ದುಬೈ ಮತ್ತು ಗಲ್ಫ್ ಕನ್ನಡ ಮೂವೀಸ್...

Related Articles

Popular Categories