ಯುಎಇglobalkannadiga.com ಭರ್ಜರಿ ಯಶಸ್ಸು ಕಾಣಲಿ

globalkannadiga.com ಭರ್ಜರಿ ಯಶಸ್ಸು ಕಾಣಲಿ

ಡಿಜಿಟಲ್ ಹಾಗು ದೃಶ್ಯ ಮಾಧ್ಯಮಗಳಲ್ಲೂ ಛಾಪು ಮೂಡಿಸಿರುವ ವಾರ್ತಾಭಾರತಿ ಅನಿವಾಸಿ ಕನ್ನಡಿಗರ ಬಗ್ಗೆ ವಿಶೇಷ ಪ್ರೀತಿ ಹಾಗು ಕಾಳಜಿಯಿಂದ ರೂಪಿಸಿರುವ ಹೊಸ ವೆಬ್ ಜಾಲತಾಣ globalkannadiga.com ಭರ್ಜರಿ ಯಶಸ್ಸು ಕಾಣಲಿ.

ಎರಡು ದಶಕಗಳಿಂದ ನಿರ್ಭೀತ ಪತ್ರಿಕೋದ್ಯಮ ನಡೆಸುತ್ತಿರುವ ‘ವಾರ್ತಾಭಾರತಿ’ ಜನಸಾಮಾನ್ಯರು ಹಾಗೂ ಸರಕಾರದ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ. ಪತ್ರಿಕೆಯ ಸಂಪಾದಕೀಯವು ಸರಕಾರ ಹಾಗೂ ಅಧಿಕಾರಿಗಳನ್ನು ನಿರಂತರವಾಗಿ ಎಚ್ಚರಿಸುತ್ತಿದೆ. ಪತ್ರಿಕೆಯಲ್ಲಿನ ವಿಶೇಷ ವರದಿಗಳು ಅದೆಷ್ಟೋ ಅವಕಾಶ ವಂಚಿತರಿಗೆ ಆಶಾಕಿರಣವಾಗಿದೆ. ಸಂವಿಧಾನದ ಆಶಯಗಳು ಈಡೇರಬೇಕಾದರೆ ಪ್ರಜಾಪ್ರಭುತ್ವದ ಮೌಲ್ಯಗಳು ಗಟ್ಟಿಗೊಳ್ಳಬೇಕು. ಅದಕ್ಕೆ ಪೂರಕವಾಗಿ ಮಾಧ್ಯಮಗಳು ಕೆಲಸ ನಿರ್ವಹಿಸಬೇಕಾಗುತ್ತದೆ. ಸದ್ಯ ಪ್ರಜಾಪ್ರಭುತ್ವದ ಉಳಿವಿಗೆ ಶ್ರಮಿಸಬೇಕಾದ ಅಗತ್ಯವಿದ್ದು, ಆ ನಿಟ್ಟಿನಲ್ಲಿ ವಾರ್ತಾಭಾರತಿ ಕನ್ನಡ ದಿನ ಪತ್ರಿಕೆ ಕೆಲಸ ಮಾಡುತ್ತಿದೆ ಇದು ಶ್ಲಾಘನೀಯ.

ಇದೀಗ ಇನ್ನೊಂದು ಹೆಜ್ಜೆ ಮುಂದಿಟ್ಟು ಡಿಜಿಟಲ್ ಹಾಗು ದೃಶ್ಯ ಮಾಧ್ಯಮಗಳಲ್ಲೂ ಛಾಪು ಮೂಡಿಸಿರುವ ವಾರ್ತಾಭಾರತಿ ಅನಿವಾಸಿ ಕನ್ನಡಿಗರ ಬಗ್ಗೆ ವಿಶೇಷ ಪ್ರೀತಿ ಹಾಗು ಕಾಳಜಿಯಿಂದ ರೂಪಿಸಿರುವ ಹೊಸ ವೆಬ್ ತಾಣ globalkannadiga.com ಎಂಬ ವೇದಿಕೆ ಸಜ್ಜು ಮಾಡಿದೆ. ಇದು ಭರ್ಜರಿ ಯಶಸ್ಸು ಕಾಣಲಿ, ಕರ್ನಾಟಕ ಸರಕಾರದ ಅನಿವಾಸಿ ಭಾರತೀಯ ಸಮಿತಿ ಹಾಗು ಅನಿವಾಸಿ ಕನ್ನಡಿಗರ ನಡುವಿನ ಸೇತುವೆಯಾಗಲಿ ಎಂದು ಹಾರೈಸುತ್ತೇನೆ.

ಅನ್ವರ್ ಮಾಣಿಲ ಯುಏಇ
ಸಂಯೋಜಕರು
ಕೆಪಿಸಿಸಿ, ಅನಿವಾಸಿ ಭಾರತೀಯ ವಿಭಾಗ
ಸಾಮಾಜಿಕ ಜಾಲತಾಣ ದಕ್ಷಿಣ ಕನ್ನಡ ಜಿಲ್ಲೆ

Hot this week

ನಾಳೆ ಒಮಾನಿನಲ್ಲಿ ‘ಮಸ್ಕತ್ ಗಡಿನಾಡ ಉತ್ಸವ-2025’ ಸಾಂಸ್ಕೃತಿಕ ಕಾರ್ಯಕ್ರಮ; ಆಮಂತ್ರಣ ಪತ್ರಿಕೆ ಅನಾವರಣ

ಮಸ್ಕತ್: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು, ಒಮಾನ್ ಘಟಕ ಮಸ್ಕತ್...

ತವರು ಪ್ರೇಮ ಮೆರೆದ ಹುಬ್ಬಳ್ಳಿ ಮೂಲದ ಕನ್ನಡಿಗ; ಲಂಡನಿನಲ್ಲಿ ತನ್ನ ಹೊಸ ‘ಟೆಸ್ಲಾ’ ಕಾರಿಗೆ ಧಾರವಾಡ ರಿಜಿಸ್ಟ್ರೇಷನ್ ಸಂಖ್ಯೆ!

ಲಂಡನ್: ವಿದೇಶದಲ್ಲಿದ್ದುಕೊಂಡು ತಮ್ಮ ತವರು ನಗರದೊಂದಿಗಿನ ಭಾವನಾತ್ಮಕ ಸಂಪರ್ಕವನ್ನು ಜೀವಂತವಾಗಿಡಲು ಇಲ್ಲೊಬ್ಬ...

Veteran expat Abdulaziz Kushalnagar passes away in Riyadh

Riyadh: Abdulaziz Kushalnagar, a long-time Indian expatriate from Kushalnagar...

ನಾಳೆ ದುಬೈನಲ್ಲಿ ‘ಗ್ಲೋಬಲ್ ಮೀಡಿಯಾ ಐಕನ್ ಪ್ರಶಸ್ತಿ 2025’ ಪ್ರದಾನ; ಭಾಗವಹಿಸಲಿರುವ ಸಚಿವರು-ಸ್ಯಾಂಡಲ್‌ವುಡ್ ತಾರೆಯರ ದಂಡು

ದುಬೈ: ಕರ್ನಾಟಕ ಮೀಡಿಯಾ ಜರ್ನಲಿಸ್ಟ್‌ ಯೂನಿಯನ್‌(KMJU) ಆಶ್ರಯದಲ್ಲಿ 'ಗ್ಲೋಬಲ್ ಮೀಡಿಯಾ ಐಕನ್...

Related Articles

Popular Categories