ಯುಎಇglobalkannadiga.com ಭರ್ಜರಿ ಯಶಸ್ಸು ಕಾಣಲಿ

globalkannadiga.com ಭರ್ಜರಿ ಯಶಸ್ಸು ಕಾಣಲಿ

ಡಿಜಿಟಲ್ ಹಾಗು ದೃಶ್ಯ ಮಾಧ್ಯಮಗಳಲ್ಲೂ ಛಾಪು ಮೂಡಿಸಿರುವ ವಾರ್ತಾಭಾರತಿ ಅನಿವಾಸಿ ಕನ್ನಡಿಗರ ಬಗ್ಗೆ ವಿಶೇಷ ಪ್ರೀತಿ ಹಾಗು ಕಾಳಜಿಯಿಂದ ರೂಪಿಸಿರುವ ಹೊಸ ವೆಬ್ ಜಾಲತಾಣ globalkannadiga.com ಭರ್ಜರಿ ಯಶಸ್ಸು ಕಾಣಲಿ.

ಎರಡು ದಶಕಗಳಿಂದ ನಿರ್ಭೀತ ಪತ್ರಿಕೋದ್ಯಮ ನಡೆಸುತ್ತಿರುವ ‘ವಾರ್ತಾಭಾರತಿ’ ಜನಸಾಮಾನ್ಯರು ಹಾಗೂ ಸರಕಾರದ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ. ಪತ್ರಿಕೆಯ ಸಂಪಾದಕೀಯವು ಸರಕಾರ ಹಾಗೂ ಅಧಿಕಾರಿಗಳನ್ನು ನಿರಂತರವಾಗಿ ಎಚ್ಚರಿಸುತ್ತಿದೆ. ಪತ್ರಿಕೆಯಲ್ಲಿನ ವಿಶೇಷ ವರದಿಗಳು ಅದೆಷ್ಟೋ ಅವಕಾಶ ವಂಚಿತರಿಗೆ ಆಶಾಕಿರಣವಾಗಿದೆ. ಸಂವಿಧಾನದ ಆಶಯಗಳು ಈಡೇರಬೇಕಾದರೆ ಪ್ರಜಾಪ್ರಭುತ್ವದ ಮೌಲ್ಯಗಳು ಗಟ್ಟಿಗೊಳ್ಳಬೇಕು. ಅದಕ್ಕೆ ಪೂರಕವಾಗಿ ಮಾಧ್ಯಮಗಳು ಕೆಲಸ ನಿರ್ವಹಿಸಬೇಕಾಗುತ್ತದೆ. ಸದ್ಯ ಪ್ರಜಾಪ್ರಭುತ್ವದ ಉಳಿವಿಗೆ ಶ್ರಮಿಸಬೇಕಾದ ಅಗತ್ಯವಿದ್ದು, ಆ ನಿಟ್ಟಿನಲ್ಲಿ ವಾರ್ತಾಭಾರತಿ ಕನ್ನಡ ದಿನ ಪತ್ರಿಕೆ ಕೆಲಸ ಮಾಡುತ್ತಿದೆ ಇದು ಶ್ಲಾಘನೀಯ.

ಇದೀಗ ಇನ್ನೊಂದು ಹೆಜ್ಜೆ ಮುಂದಿಟ್ಟು ಡಿಜಿಟಲ್ ಹಾಗು ದೃಶ್ಯ ಮಾಧ್ಯಮಗಳಲ್ಲೂ ಛಾಪು ಮೂಡಿಸಿರುವ ವಾರ್ತಾಭಾರತಿ ಅನಿವಾಸಿ ಕನ್ನಡಿಗರ ಬಗ್ಗೆ ವಿಶೇಷ ಪ್ರೀತಿ ಹಾಗು ಕಾಳಜಿಯಿಂದ ರೂಪಿಸಿರುವ ಹೊಸ ವೆಬ್ ತಾಣ globalkannadiga.com ಎಂಬ ವೇದಿಕೆ ಸಜ್ಜು ಮಾಡಿದೆ. ಇದು ಭರ್ಜರಿ ಯಶಸ್ಸು ಕಾಣಲಿ, ಕರ್ನಾಟಕ ಸರಕಾರದ ಅನಿವಾಸಿ ಭಾರತೀಯ ಸಮಿತಿ ಹಾಗು ಅನಿವಾಸಿ ಕನ್ನಡಿಗರ ನಡುವಿನ ಸೇತುವೆಯಾಗಲಿ ಎಂದು ಹಾರೈಸುತ್ತೇನೆ.

ಅನ್ವರ್ ಮಾಣಿಲ ಯುಏಇ
ಸಂಯೋಜಕರು
ಕೆಪಿಸಿಸಿ, ಅನಿವಾಸಿ ಭಾರತೀಯ ವಿಭಾಗ
ಸಾಮಾಜಿಕ ಜಾಲತಾಣ ದಕ್ಷಿಣ ಕನ್ನಡ ಜಿಲ್ಲೆ

Hot this week

ಅಬುಧಾಬಿಗೆ ಸಚಿವ ಡಾ.ಜೈಶಂಕರ್ ಭೇಟಿ; ಕನ್ನಡಿಗರ ಕೂಟ ದುಬೈ-ಅಬುಧಾಬಿ ಕರ್ನಾಟಕ ಸಂಘ ಪ್ರತಿನಿಧಿತ್ವ

ಅಬುಧಾಬಿ: ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು...

ದುಬೈ; ‘ಬ್ಯಾರೀಸ್ ಪ್ರೀಮಿಯರ್ ಲೀಗ್-2026’ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕ್ರೌನ್ ಹೊನ್ನಾವರ; ನಫೀಸ್ ಗ್ರೂಪ್ ರನ್ನರ್ ಅಪ್

ದುಬೈ: ಶಾರ್ಜಾದ ಬಿಜೋಯ್ಸ್ ಕ್ರಿಕೆಟ್ ಕ್ರೀಡಾಗಂಣದಲ್ಲಿ ರವಿವಾರ ನಡೆದ 'ಬ್ಯಾರೀಸ್ ಪ್ರೀಮಿಯರ್...

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಆಯ್ಕೆ

ದುಬೈ: ಕರ್ನಾಟಕ ಸಂಘ ಶಾರ್ಜಾ ಇದರ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ...

ರಮಝಾನ್-ಈದುಲ್ ಫಿತ್ರ್ ಅಂಗವಾಗಿ ಕನ್ನಡ ಸಂಘ ಬಹರೈನ್ ವತಿಯಿಂದ ಆಹಾರ ವಸ್ತುಗಳ ಕಿಟ್ ವಿತರಣೆ

ಬಹರೈನ್: ಪವಿತ್ರ ರಮಝಾನ್ ಮತ್ತು ಈದುಲ್ ಫಿತ್ರ್ ಹಬ್ಬದ ಅಂಗವಾಗಿ ಪ್ರಸ್ತುತ...

Related Articles

Popular Categories